ಮುಂಬಯಿ: ಸೋಮವಾರದಂದು ಮುಂಬಯಿಯಲ್ಲಿ ಬೀಸಿದ ಬಿರುಗಾಳಿ ಮತ್ತು ಅದರ ಜೊತೆ ಸುರಿದ ಮುಂಗಾರು ಪೂರ್ವ ಮಳೆಯಿಂದಾಗಿ ಘಾಟ್ಕೊಪರ್ ಉಪನಗರದಲ್ಲಿ ಬೃಹತ್ ಬಿಲ್ ಬೋರ್ಡ್ ಉರುಳಿಬಿದ್ದು ಕನಿಷ್ಟ ಹದಿನಾಲ್ಕು ಮಂದಿ ಮೃತಪಟ್ಟಿದ್ದಾರೆ ಹಾಗು ಇತರ ಕನಿಷ್ಠ ಎಪ್ಪತ್ತು ಮಂದಿ ಹಾಯಗೊಂಡಿದ್ದಾರೆ.
ಪಾಲಿಕೆ ಅಧಿಕಾರಿಗಳು ಈ ಬಿಲ್ ಬೋರ್ಡನ್ನು ಅಕ್ರಮವಾಗಿ ಅಳವಡಿಸಲಾಗಿತ್ತು ಎಂದು ಹೇಳಿದ್ದಾರೆ. ಪೆಟ್ರೋಲ್ ಪಂಪ್ ಬಳಿ ಈ ದುರ್ಘಟನೆ ಸಂಭವಿದ್ದರಿಂದ ನೂರು ಅಡಿಗೂ ಹೆಚ್ಚು ಎತ್ತರದ ಬಿಲ್ ಬೋರ್ಡ್ ಮಗುಚಿಕೊಂಡ ಘಟನೆಯಲ್ಲಿ ಅದರಡಿಗೆ ಸಿಲುಕಿದವರನ್ನು ರಕ್ಷಿಸುವ ಕಾರ್ಯ ನಿಧಾನಗತಿಯಿಂದ ಸಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…