ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಬಸ್ ನಿಲ್ದಾಣದಲ್ಲಿ ನಿಂತಿದ್ದ ಆಟೋಗೆ ಕಾರು ಡಿಕ್ಕಿ ಹೊಡೆದು ಪರಾರಿ; ಚಾಲಕ ಪವಾಡ ಸದೃಶ ಪಾರು

ಮುಲ್ಕಿ: ಬಸ್ ನಿಲ್ದಾಣ ಬಳಿ ಪ್ರಯಾಣಿಕರಿಗಾಗಿ ನಿಂತಿದ್ದ ಆಟೋ ಗೆ ಅತೀ ವೇಗದಿಂದ ಬಂದ ಮಂಗಳೂರು ಕಡೆಯಿಂದ ಹೆದ್ದಾರಿಯಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಆಟೋಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಸ್ಥಳೀಯರ ಹಾಗೂ ಮಂಗಳೂರ ಉತ್ತರ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆಯಿಂದ ಕಾರು ಚಾಲಕನನ್ನು ಹಾಗೂ ಅದರಲ್ಲಿದ್ದವರನ್ನು ದ.ಕ ಗಡಿಭಾಗದ ಹೆಜಮಾಡಿ ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಮಣಿಪಾಲದ ಮೂಲದ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಮಣಿಪಾಲ ಮೂಲದ ಕಾಲೇಜು ವಿದ್ಯಾರ್ಥಿಗಳು ಬಾಡಿಗೆ ಕಾರಿನಲ್ಲಿ ಮಂಗಳೂರಿನ ತಣ್ಣೀರು ಬಾವಿಯಿಂದ ಅತಿವೇಗದ ಚಾಲನೆ ಮೂಲಕ ಮಣಿಪಾಲಕ್ಕೆ ಹೊರಟಿದ್ದು ಮುಲ್ಕಿ ಬಸ್ ನಿಲ್ದಾಣದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ವೇಗ ತಡೆಗೆ ಇರಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಕಾದು ಕುಳಿತಿದ್ದ ಎರಡು ಆಟೋಗಳಿಗೆ ಡಿಕ್ಕಿ ಹೊಡೆದಿದೆ.
ಈ ಸಂದರ್ಭ ಆಟೋ ಚಾಲಕರಾದ ಎಳತ್ತೂರು ನಿವಾಸಿ ಪ್ರಶಾಂತ್ ನೆಲಗುಡ್ಡೆ, ಕೊಲ್ನಾಡು ನಿವಾಸಿ ಪ್ರಭಾಕರ ಶೆಟ್ಟಿ ಪವಾಡ ಸದೃಶ ಪಾರಾಗಿದ್ದು, ಆಟೋಗಳು ಜಖಂಗೊಂಡಿದೆ
ಅಪಘಾತದ ಸಂದರ್ಭ ಕಾರ್ ಚಾಲಕ ಮತ್ತಷ್ಟು ಗಲಿಬಿಲಿ ಗೊಂಡಿದ್ದು ಕಾರನ್ನು ರಿವರ್ಸ್ ತೆಗೆಯುವ ಯತ್ನದಲ್ಲಿ ಭಾರೀ ಗಾತ್ರದ ಕಲ್ಲಿಗೆ ಡಿಕ್ಕಿ ಹೊಡೆದಾಗ ಕಾರಿನ ಟಯರ್ ಪಂಕ್ಚರ್ ಆಗಿದೆ. ಆದರೂ ಅದರ ಚಾಲಕ ಕಾರನ್ನು ನಿಲ್ಲಿಸಿದೆ ಸ್ಥಳದಿಂದ ಪರಾರಿಯಾಗಿ ಸುಮಾರು ಎರಡು ಕಿಮೀ ದೂರ ಚಲಿಸಿ ಹೆಜಮಾಡಿ ಚೆಕ್ ಪೋಸ್ಟ್ ಬಳಿಯ ಒಳ ರಸ್ತೆಯಲ್ಲಿ ಅಡಗಿ ಕುಳಿತಿದ್ದಾನೆ.
ಅಪಘಾತ ನಡೆದ ಕೂಡಲೇ ಪರಾರಿಯಾದ ಕಾರನ್ನು ಸ್ಥಳೀಯರು ಹಾಗೂ ಆಟೋ ಚಾಲಕರು ಬೆನ್ನಟ್ಟಿದ್ದು ಹೆಜಮಾಡಿ ಚೆಕ್ ಪೋಸ್ಟ್ ಬಳಿಯ ಒಳ ರಸ್ತೆಯಲ್ಲಿ ನಿಂತಿದ್ದ ಕಾರಿನಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿ ಸ್ಥಳಕ್ಕೆ ಧಾವಿಸಿ ಕಾರಿನ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಮಂಗಳೂರು ಟ್ರಾಫಿಕ್ ಪೊಲೀಸ್ ಮುಖಾಂತರ ಕಾರ್ ಚಾಲಕ ಹಾಗೂ ಇತರ ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!