ಮುಲ್ಕಿ: ಬಸ್ ನಿಲ್ದಾಣ ಬಳಿ ಪ್ರಯಾಣಿಕರಿಗಾಗಿ ನಿಂತಿದ್ದ ಆಟೋ ಗೆ ಅತೀ ವೇಗದಿಂದ ಬಂದ ಮಂಗಳೂರು ಕಡೆಯಿಂದ ಹೆದ್ದಾರಿಯಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಆಟೋಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಸ್ಥಳೀಯರ ಹಾಗೂ ಮಂಗಳೂರ ಉತ್ತರ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆಯಿಂದ ಕಾರು ಚಾಲಕನನ್ನು ಹಾಗೂ ಅದರಲ್ಲಿದ್ದವರನ್ನು ದ.ಕ ಗಡಿಭಾಗದ ಹೆಜಮಾಡಿ ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಮಣಿಪಾಲದ ಮೂಲದ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಮಣಿಪಾಲ ಮೂಲದ ಕಾಲೇಜು ವಿದ್ಯಾರ್ಥಿಗಳು ಬಾಡಿಗೆ ಕಾರಿನಲ್ಲಿ ಮಂಗಳೂರಿನ ತಣ್ಣೀರು ಬಾವಿಯಿಂದ ಅತಿವೇಗದ ಚಾಲನೆ ಮೂಲಕ ಮಣಿಪಾಲಕ್ಕೆ ಹೊರಟಿದ್ದು ಮುಲ್ಕಿ ಬಸ್ ನಿಲ್ದಾಣದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ವೇಗ ತಡೆಗೆ ಇರಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಕಾದು ಕುಳಿತಿದ್ದ ಎರಡು ಆಟೋಗಳಿಗೆ ಡಿಕ್ಕಿ ಹೊಡೆದಿದೆ.
ಈ ಸಂದರ್ಭ ಆಟೋ ಚಾಲಕರಾದ ಎಳತ್ತೂರು ನಿವಾಸಿ ಪ್ರಶಾಂತ್ ನೆಲಗುಡ್ಡೆ, ಕೊಲ್ನಾಡು ನಿವಾಸಿ ಪ್ರಭಾಕರ ಶೆಟ್ಟಿ ಪವಾಡ ಸದೃಶ ಪಾರಾಗಿದ್ದು, ಆಟೋಗಳು ಜಖಂಗೊಂಡಿದೆ
ಅಪಘಾತದ ಸಂದರ್ಭ ಕಾರ್ ಚಾಲಕ ಮತ್ತಷ್ಟು ಗಲಿಬಿಲಿ ಗೊಂಡಿದ್ದು ಕಾರನ್ನು ರಿವರ್ಸ್ ತೆಗೆಯುವ ಯತ್ನದಲ್ಲಿ ಭಾರೀ ಗಾತ್ರದ ಕಲ್ಲಿಗೆ ಡಿಕ್ಕಿ ಹೊಡೆದಾಗ ಕಾರಿನ ಟಯರ್ ಪಂಕ್ಚರ್ ಆಗಿದೆ. ಆದರೂ ಅದರ ಚಾಲಕ ಕಾರನ್ನು ನಿಲ್ಲಿಸಿದೆ ಸ್ಥಳದಿಂದ ಪರಾರಿಯಾಗಿ ಸುಮಾರು ಎರಡು ಕಿಮೀ ದೂರ ಚಲಿಸಿ ಹೆಜಮಾಡಿ ಚೆಕ್ ಪೋಸ್ಟ್ ಬಳಿಯ ಒಳ ರಸ್ತೆಯಲ್ಲಿ ಅಡಗಿ ಕುಳಿತಿದ್ದಾನೆ.
ಅಪಘಾತ ನಡೆದ ಕೂಡಲೇ ಪರಾರಿಯಾದ ಕಾರನ್ನು ಸ್ಥಳೀಯರು ಹಾಗೂ ಆಟೋ ಚಾಲಕರು ಬೆನ್ನಟ್ಟಿದ್ದು ಹೆಜಮಾಡಿ ಚೆಕ್ ಪೋಸ್ಟ್ ಬಳಿಯ ಒಳ ರಸ್ತೆಯಲ್ಲಿ ನಿಂತಿದ್ದ ಕಾರಿನಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿ ಸ್ಥಳಕ್ಕೆ ಧಾವಿಸಿ ಕಾರಿನ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಮಂಗಳೂರು ಟ್ರಾಫಿಕ್ ಪೊಲೀಸ್ ಮುಖಾಂತರ ಕಾರ್ ಚಾಲಕ ಹಾಗೂ ಇತರ ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…