ಮುಲ್ಕಿ: ಬಸ್ ನಿಲ್ದಾಣ ಬಳಿ ಪ್ರಯಾಣಿಕರಿಗಾಗಿ ನಿಂತಿದ್ದ ಆಟೋ ಗೆ ಅತೀ ವೇಗದಿಂದ ಬಂದ ಮಂಗಳೂರು ಕಡೆಯಿಂದ ಹೆದ್ದಾರಿಯಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಆಟೋಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಸ್ಥಳೀಯರ ಹಾಗೂ ಮಂಗಳೂರ ಉತ್ತರ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆಯಿಂದ ಕಾರು ಚಾಲಕನನ್ನು ಹಾಗೂ ಅದರಲ್ಲಿದ್ದವರನ್ನು ದ.ಕ ಗಡಿಭಾಗದ ಹೆಜಮಾಡಿ ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಮಣಿಪಾಲದ ಮೂಲದ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಮಣಿಪಾಲ ಮೂಲದ ಕಾಲೇಜು ವಿದ್ಯಾರ್ಥಿಗಳು ಬಾಡಿಗೆ ಕಾರಿನಲ್ಲಿ ಮಂಗಳೂರಿನ ತಣ್ಣೀರು ಬಾವಿಯಿಂದ ಅತಿವೇಗದ ಚಾಲನೆ ಮೂಲಕ ಮಣಿಪಾಲಕ್ಕೆ ಹೊರಟಿದ್ದು ಮುಲ್ಕಿ ಬಸ್ ನಿಲ್ದಾಣದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ವೇಗ ತಡೆಗೆ ಇರಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಕಾದು ಕುಳಿತಿದ್ದ ಎರಡು ಆಟೋಗಳಿಗೆ ಡಿಕ್ಕಿ ಹೊಡೆದಿದೆ.
ಈ ಸಂದರ್ಭ ಆಟೋ ಚಾಲಕರಾದ ಎಳತ್ತೂರು ನಿವಾಸಿ ಪ್ರಶಾಂತ್ ನೆಲಗುಡ್ಡೆ, ಕೊಲ್ನಾಡು ನಿವಾಸಿ ಪ್ರಭಾಕರ ಶೆಟ್ಟಿ ಪವಾಡ ಸದೃಶ ಪಾರಾಗಿದ್ದು, ಆಟೋಗಳು ಜಖಂಗೊಂಡಿದೆ
ಅಪಘಾತದ ಸಂದರ್ಭ ಕಾರ್ ಚಾಲಕ ಮತ್ತಷ್ಟು ಗಲಿಬಿಲಿ ಗೊಂಡಿದ್ದು ಕಾರನ್ನು ರಿವರ್ಸ್ ತೆಗೆಯುವ ಯತ್ನದಲ್ಲಿ ಭಾರೀ ಗಾತ್ರದ ಕಲ್ಲಿಗೆ ಡಿಕ್ಕಿ ಹೊಡೆದಾಗ ಕಾರಿನ ಟಯರ್ ಪಂಕ್ಚರ್ ಆಗಿದೆ. ಆದರೂ ಅದರ ಚಾಲಕ ಕಾರನ್ನು ನಿಲ್ಲಿಸಿದೆ ಸ್ಥಳದಿಂದ ಪರಾರಿಯಾಗಿ ಸುಮಾರು ಎರಡು ಕಿಮೀ ದೂರ ಚಲಿಸಿ ಹೆಜಮಾಡಿ ಚೆಕ್ ಪೋಸ್ಟ್ ಬಳಿಯ ಒಳ ರಸ್ತೆಯಲ್ಲಿ ಅಡಗಿ ಕುಳಿತಿದ್ದಾನೆ.
ಅಪಘಾತ ನಡೆದ ಕೂಡಲೇ ಪರಾರಿಯಾದ ಕಾರನ್ನು ಸ್ಥಳೀಯರು ಹಾಗೂ ಆಟೋ ಚಾಲಕರು ಬೆನ್ನಟ್ಟಿದ್ದು ಹೆಜಮಾಡಿ ಚೆಕ್ ಪೋಸ್ಟ್ ಬಳಿಯ ಒಳ ರಸ್ತೆಯಲ್ಲಿ ನಿಂತಿದ್ದ ಕಾರಿನಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿ ಸ್ಥಳಕ್ಕೆ ಧಾವಿಸಿ ಕಾರಿನ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಮಂಗಳೂರು ಟ್ರಾಫಿಕ್ ಪೊಲೀಸ್ ಮುಖಾಂತರ ಕಾರ್ ಚಾಲಕ ಹಾಗೂ ಇತರ ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…