ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಡೆತ್ ನೋಟ್ ಬರೆದಿಟ್ಟು ಮಹಿಳೆ ನೇಣಿಗೆ ಶರಣು

ಉಡುಪಿ: ಮಾನಸಿಕವಾಗಿ ನೊಂದ ಮಹಿಳೆಯೊರ್ವಳು ಮನೆಯ ಅಡಿಗೆ ಮನೆಯ ಮಾಡಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಂಗ್ರಪಾಡಿಯ ಸಾಯಿಬಾಬ ಮಂದಿರದ ಬಳಿ ನಡೆದಿದೆ.

ಕೊರಂಗ್ರಪಾಡಿಯ ಸಾಯಿಬಾಬ ಮಂದಿರದ ಬಳಿಯ ನಿವಾಸಿ ಭಾರತಿ ಶೆಟ್ಟಿಗಾರ್ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ನೇಕಾರಿಕೆ ಕೆಲಸ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ನೆರೆಮನೆಯವರಿಗೆ ಪೋನ್ ಕರೆ ಮಾಡಿ ತಿಳಿಸಿದ್ದರು. ಆದರೆ, ನೆರೆಮನೆಯವರು ಬಂದು ನೋಡುವಾಗ ಭಾರತಿ ಅವರು ಮೃತಪಟ್ಟಿದ್ದರು.
ಮೃತದೇಹದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ 500 ರೂ ಬೈಲೂರು ಮಹಿಷಿಮರ್ಧಿನಿ ದೇವಸ್ಥಾನದಲ್ಲಿ ನಡೆಯುವ ಹೂವಿನ ಪೂಜೆಗೆ ಮತ್ತು 200 ರೂಪಾಯಿ ದಿನ ಪತ್ರಿಕೆಯ ತಿಂಗಳ ಬಿಲ್ಲು ಪಾವತಿಸಬೇಕು. ಹಾಗೆಯೇ ಗಂಡನ ಪೋಷಣೆಗೆ ನನ್ನ ಚಿನ್ನ, ಹಣ ಸಾಕು ಎಂದು ಬರೆಯಲಾಗಿದೆ.
ಘಟನಾಸ್ಥಳಕ್ಕೆ ಎ.ಎಸ್.ಐ ವಿಜಯ, ತನಿಖಾ ಸಹಾಯಕರಾಗಿರುವ ನೇತ್ರ, ಶಿವಕುಮಾರ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಅಜ್ಜರಕಾಡಿನ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು, ಉಚಿತ ಆ್ಯಂಬುಲೆನ್ಸ್ ಸೇವೆ ನೀಡಿ ಇಲಾಖೆಗೆ ನೆರವಾದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!