ಉಡುಪಿ: ಮಾನಸಿಕವಾಗಿ ನೊಂದ ಮಹಿಳೆಯೊರ್ವಳು ಮನೆಯ ಅಡಿಗೆ ಮನೆಯ ಮಾಡಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಂಗ್ರಪಾಡಿಯ ಸಾಯಿಬಾಬ ಮಂದಿರದ ಬಳಿ ನಡೆದಿದೆ.
ಕೊರಂಗ್ರಪಾಡಿಯ ಸಾಯಿಬಾಬ ಮಂದಿರದ ಬಳಿಯ ನಿವಾಸಿ ಭಾರತಿ ಶೆಟ್ಟಿಗಾರ್ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ನೇಕಾರಿಕೆ ಕೆಲಸ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ನೆರೆಮನೆಯವರಿಗೆ ಪೋನ್ ಕರೆ ಮಾಡಿ ತಿಳಿಸಿದ್ದರು. ಆದರೆ, ನೆರೆಮನೆಯವರು ಬಂದು ನೋಡುವಾಗ ಭಾರತಿ ಅವರು ಮೃತಪಟ್ಟಿದ್ದರು.
ಮೃತದೇಹದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ 500 ರೂ ಬೈಲೂರು ಮಹಿಷಿಮರ್ಧಿನಿ ದೇವಸ್ಥಾನದಲ್ಲಿ ನಡೆಯುವ ಹೂವಿನ ಪೂಜೆಗೆ ಮತ್ತು 200 ರೂಪಾಯಿ ದಿನ ಪತ್ರಿಕೆಯ ತಿಂಗಳ ಬಿಲ್ಲು ಪಾವತಿಸಬೇಕು. ಹಾಗೆಯೇ ಗಂಡನ ಪೋಷಣೆಗೆ ನನ್ನ ಚಿನ್ನ, ಹಣ ಸಾಕು ಎಂದು ಬರೆಯಲಾಗಿದೆ.
ಘಟನಾಸ್ಥಳಕ್ಕೆ ಎ.ಎಸ್.ಐ ವಿಜಯ, ತನಿಖಾ ಸಹಾಯಕರಾಗಿರುವ ನೇತ್ರ, ಶಿವಕುಮಾರ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಅಜ್ಜರಕಾಡಿನ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು, ಉಚಿತ ಆ್ಯಂಬುಲೆನ್ಸ್ ಸೇವೆ ನೀಡಿ ಇಲಾಖೆಗೆ ನೆರವಾದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…