ಮಂಡ್ಯ: ಮಂಡ್ಯದ ಮೈಶುಗರ್ ಕಾರ್ಖಾನೆ, ಸರ್ಕಾರಿ ಸ್ವಾಮ್ಯದ ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ. ಇಲ್ಲಿ ಪ್ರಸಕ್ತ ಸಾಲಿನ ಹಂಗಾಮಿನ ಕಬ್ಬು ನುರಿಸುವ ಕಾರ್ಯಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಕಾರ್ಖಾನೆ ಪುನರಾರಂಭದ ಭರವಸೆಯನ್ನು ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಕೊಟ್ಟಿತ್ತು. ಅದರಂತೆಯೇ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸಿಎಂ ಸಿದ್ದರಾಮಯ್ಯ 50 ಕೋಟಿ ರೂ ಅನುದಾನ ಬಿಡುಗಡೆ ಮಾಡಿದ್ದರು. ಅನುದಾನ ಬಿಡುಗಡೆಯಾದ ವಾರದಲ್ಲಿಯೇ ಕಾರ್ಖಾನೆ ಬಾಯ್ಲರ್ಗೆ ಅಗ್ನಿಸ್ಪರ್ಶವನ್ನೂ ಮಾಡಲಾಗಿತ್ತು. ಇದೀಗ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ ಕಾರ್ಖಾನೆ ಅಧಿಕೃತವಾಗಿ ಪುನರಾರಂಭವಾಗಿದೆ.
ಕಾರ್ಖಾನೆ ಆವರಣದಲ್ಲಿ ಮೊದಲು ದೇವರಿಗೆ ಪೂಜೆ ಸಲ್ಲಿಸಲಾಯಿತು. ನಂತರ ಸಕ್ಕರೆ ಸಚಿವ ಶಿವಾನಂದ ಎಸ್. ಪಾಟೀಲ್ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಸಚಿವ ಶಿವಾನಂದ ಪಾಟೀಲ್ ಮಾತನಾಡಿ, “ಪ್ರಸಕ್ತ ಸಾಲಿನ ಹಂಗಾಮಿನಲ್ಲಿ ಪ್ರತಿದಿನ 3 ಸಾವಿರ ಟನ್ ಕಬ್ಬು ನುರಿಸುವ ಗುರಿ ಇದೆ. ಕಾರ್ಖಾನೆಯಲ್ಲಿ ಕಬ್ಬು ನುರಿಯುವ ಕಾರ್ಯಕ್ಕೆ ಕೆಲವು ದಿನ ಟರ್ಬೈನ್ ಸಮಸ್ಯೆಯಿಂದ ತಡವಾಯಿತು. ಗುರುವಾರ ಮತ್ತು ಶುಕ್ರವಾರ 1,500 ರಿಂದ 2,000 ಟನ್ ಕಬ್ಬು ನುರಿಸಲಾಗುವುದು. ಕಾಲಕ್ರಮೇಣ 3 ಸಾವಿರ ಟನ್ನಿಂದ 5 ಸಾವಿರ ಟನ್ವರೆಗೂ ನುರಿಯುವ ಕೆಲಸ ನಡೆಯಲಿದೆ. ರೈತರಿಗೆ ಎಫ್ಆರ್ಪಿ ಪ್ರಕಾರ ದರ ನೀಡಿ ಕಬ್ಬು ಖರೀದಿಸಲಾಗುವುದು. ಕಳೆದ ಬಾರಿ ಕಡಿಮೆ ರಿಕವರಿ ಇದ್ದರೂ ರೈತರಿಗೆ 2,800 ರೂ ನೀಡಲಾಗಿದೆ” ಎಂದರು.
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, “ಸರ್ಕಾರದ ಬೆಂಬಲದಿಂದ ಕಾರ್ಖಾನೆ ಪ್ರಾರಂಭವಾಗಿದೆ. ಕಬ್ಬು ಅರೆಯುವ ಕಾರ್ಯ ಹೆಚ್ಚು ನಡೆಯುತ್ತದೆ. ಮುಂದಿನ ದಿನಗಳಲ್ಲಿ ಕಾರ್ಖಾನೆ ಉನ್ನತ ಮಟ್ಟದಲ್ಲಿ ನಡೆಯಲಿದೆ” ಎಂದರು.
“ಮೈಶುಗರ್ನಲ್ಲಿ ಕೆಲವು ಸಮಸ್ಯೆ ಮತ್ತು ಗೊಂದಲವಿದೆ. ಅವುಗಳನ್ನು ಸರಿಪಡಿಸಿಕೊಂಡು ಹೋದರೆ ಮುಂದೆ ಯಾವುದೇ ಸಮಸ್ಯೆ ಬರಲ್ಲ. 40 ಕೋಟಿ ರೂ ಕರೆಂಟ್ ಬಿಲ್ ಬಾಕಿಯ ಬಗ್ಗೆ ರಾಜ್ಯದ ಇಂಧನ ಸಚಿವರಿಗೆ ಪತ್ರ ಬರೆದು ಮನ್ನಾ ಮಾಡುವಂತೆ ಮನವಿ ಮಾಡುತ್ತೇನೆ” ಎಂದು ಸಂಸದೆ ಸುಮಾಲತಾ ತಿಳಿಸಿದರು.
ಶಾಸಕ ಗಣಿಗ ರವಿಕುಮಾರ್, ರಮೇಶ್ ಬಾಬು ಬಂಡಿಸಿದ್ದೇ ಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್, ಎಸ್ಪಿ ಎನ್. ಯತೀಶ್ ಸೇರಿ ರೈತ ನಾಯಕರು ಭಾಗಿಯಾಗಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…