ಮಂಡ್ಯ: ಮಂಡ್ಯದ ಮೈಶುಗರ್ ಕಾರ್ಖಾನೆ, ಸರ್ಕಾರಿ ಸ್ವಾಮ್ಯದ ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ. ಇಲ್ಲಿ ಪ್ರಸಕ್ತ ಸಾಲಿನ ಹಂಗಾಮಿನ ಕಬ್ಬು ನುರಿಸುವ ಕಾರ್ಯಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಕಾರ್ಖಾನೆ ಪುನರಾರಂಭದ ಭರವಸೆಯನ್ನು ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಕೊಟ್ಟಿತ್ತು. ಅದರಂತೆಯೇ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸಿಎಂ ಸಿದ್ದರಾಮಯ್ಯ 50 ಕೋಟಿ ರೂ ಅನುದಾನ ಬಿಡುಗಡೆ ಮಾಡಿದ್ದರು. ಅನುದಾನ ಬಿಡುಗಡೆಯಾದ ವಾರದಲ್ಲಿಯೇ ಕಾರ್ಖಾನೆ ಬಾಯ್ಲರ್ಗೆ ಅಗ್ನಿಸ್ಪರ್ಶವನ್ನೂ ಮಾಡಲಾಗಿತ್ತು. ಇದೀಗ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ ಕಾರ್ಖಾನೆ ಅಧಿಕೃತವಾಗಿ ಪುನರಾರಂಭವಾಗಿದೆ.
ಕಾರ್ಖಾನೆ ಆವರಣದಲ್ಲಿ ಮೊದಲು ದೇವರಿಗೆ ಪೂಜೆ ಸಲ್ಲಿಸಲಾಯಿತು. ನಂತರ ಸಕ್ಕರೆ ಸಚಿವ ಶಿವಾನಂದ ಎಸ್. ಪಾಟೀಲ್ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಸಚಿವ ಶಿವಾನಂದ ಪಾಟೀಲ್ ಮಾತನಾಡಿ, “ಪ್ರಸಕ್ತ ಸಾಲಿನ ಹಂಗಾಮಿನಲ್ಲಿ ಪ್ರತಿದಿನ 3 ಸಾವಿರ ಟನ್ ಕಬ್ಬು ನುರಿಸುವ ಗುರಿ ಇದೆ. ಕಾರ್ಖಾನೆಯಲ್ಲಿ ಕಬ್ಬು ನುರಿಯುವ ಕಾರ್ಯಕ್ಕೆ ಕೆಲವು ದಿನ ಟರ್ಬೈನ್ ಸಮಸ್ಯೆಯಿಂದ ತಡವಾಯಿತು. ಗುರುವಾರ ಮತ್ತು ಶುಕ್ರವಾರ 1,500 ರಿಂದ 2,000 ಟನ್ ಕಬ್ಬು ನುರಿಸಲಾಗುವುದು. ಕಾಲಕ್ರಮೇಣ 3 ಸಾವಿರ ಟನ್ನಿಂದ 5 ಸಾವಿರ ಟನ್ವರೆಗೂ ನುರಿಯುವ ಕೆಲಸ ನಡೆಯಲಿದೆ. ರೈತರಿಗೆ ಎಫ್ಆರ್ಪಿ ಪ್ರಕಾರ ದರ ನೀಡಿ ಕಬ್ಬು ಖರೀದಿಸಲಾಗುವುದು. ಕಳೆದ ಬಾರಿ ಕಡಿಮೆ ರಿಕವರಿ ಇದ್ದರೂ ರೈತರಿಗೆ 2,800 ರೂ ನೀಡಲಾಗಿದೆ” ಎಂದರು.
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, “ಸರ್ಕಾರದ ಬೆಂಬಲದಿಂದ ಕಾರ್ಖಾನೆ ಪ್ರಾರಂಭವಾಗಿದೆ. ಕಬ್ಬು ಅರೆಯುವ ಕಾರ್ಯ ಹೆಚ್ಚು ನಡೆಯುತ್ತದೆ. ಮುಂದಿನ ದಿನಗಳಲ್ಲಿ ಕಾರ್ಖಾನೆ ಉನ್ನತ ಮಟ್ಟದಲ್ಲಿ ನಡೆಯಲಿದೆ” ಎಂದರು.
“ಮೈಶುಗರ್ನಲ್ಲಿ ಕೆಲವು ಸಮಸ್ಯೆ ಮತ್ತು ಗೊಂದಲವಿದೆ. ಅವುಗಳನ್ನು ಸರಿಪಡಿಸಿಕೊಂಡು ಹೋದರೆ ಮುಂದೆ ಯಾವುದೇ ಸಮಸ್ಯೆ ಬರಲ್ಲ. 40 ಕೋಟಿ ರೂ ಕರೆಂಟ್ ಬಿಲ್ ಬಾಕಿಯ ಬಗ್ಗೆ ರಾಜ್ಯದ ಇಂಧನ ಸಚಿವರಿಗೆ ಪತ್ರ ಬರೆದು ಮನ್ನಾ ಮಾಡುವಂತೆ ಮನವಿ ಮಾಡುತ್ತೇನೆ” ಎಂದು ಸಂಸದೆ ಸುಮಾಲತಾ ತಿಳಿಸಿದರು.
ಶಾಸಕ ಗಣಿಗ ರವಿಕುಮಾರ್, ರಮೇಶ್ ಬಾಬು ಬಂಡಿಸಿದ್ದೇ ಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್, ಎಸ್ಪಿ ಎನ್. ಯತೀಶ್ ಸೇರಿ ರೈತ ನಾಯಕರು ಭಾಗಿಯಾಗಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…