ಮಂಡ್ಯ: ಮಂಡ್ಯದ ಮೈಶುಗರ್ ಕಾರ್ಖಾನೆ, ಸರ್ಕಾರಿ ಸ್ವಾಮ್ಯದ ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ. ಇಲ್ಲಿ ಪ್ರಸಕ್ತ ಸಾಲಿನ ಹಂಗಾಮಿನ ಕಬ್ಬು ನುರಿಸುವ ಕಾರ್ಯಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಕಾರ್ಖಾನೆ ಪುನರಾರಂಭದ ಭರವಸೆಯನ್ನು ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಕೊಟ್ಟಿತ್ತು. ಅದರಂತೆಯೇ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸಿಎಂ ಸಿದ್ದರಾಮಯ್ಯ 50 ಕೋಟಿ ರೂ ಅನುದಾನ ಬಿಡುಗಡೆ ಮಾಡಿದ್ದರು. ಅನುದಾನ ಬಿಡುಗಡೆಯಾದ ವಾರದಲ್ಲಿಯೇ ಕಾರ್ಖಾನೆ ಬಾಯ್ಲರ್ಗೆ ಅಗ್ನಿಸ್ಪರ್ಶವನ್ನೂ ಮಾಡಲಾಗಿತ್ತು. ಇದೀಗ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ ಕಾರ್ಖಾನೆ ಅಧಿಕೃತವಾಗಿ ಪುನರಾರಂಭವಾಗಿದೆ.
ಕಾರ್ಖಾನೆ ಆವರಣದಲ್ಲಿ ಮೊದಲು ದೇವರಿಗೆ ಪೂಜೆ ಸಲ್ಲಿಸಲಾಯಿತು. ನಂತರ ಸಕ್ಕರೆ ಸಚಿವ ಶಿವಾನಂದ ಎಸ್. ಪಾಟೀಲ್ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಸಚಿವ ಶಿವಾನಂದ ಪಾಟೀಲ್ ಮಾತನಾಡಿ, “ಪ್ರಸಕ್ತ ಸಾಲಿನ ಹಂಗಾಮಿನಲ್ಲಿ ಪ್ರತಿದಿನ 3 ಸಾವಿರ ಟನ್ ಕಬ್ಬು ನುರಿಸುವ ಗುರಿ ಇದೆ. ಕಾರ್ಖಾನೆಯಲ್ಲಿ ಕಬ್ಬು ನುರಿಯುವ ಕಾರ್ಯಕ್ಕೆ ಕೆಲವು ದಿನ ಟರ್ಬೈನ್ ಸಮಸ್ಯೆಯಿಂದ ತಡವಾಯಿತು. ಗುರುವಾರ ಮತ್ತು ಶುಕ್ರವಾರ 1,500 ರಿಂದ 2,000 ಟನ್ ಕಬ್ಬು ನುರಿಸಲಾಗುವುದು. ಕಾಲಕ್ರಮೇಣ 3 ಸಾವಿರ ಟನ್ನಿಂದ 5 ಸಾವಿರ ಟನ್ವರೆಗೂ ನುರಿಯುವ ಕೆಲಸ ನಡೆಯಲಿದೆ. ರೈತರಿಗೆ ಎಫ್ಆರ್ಪಿ ಪ್ರಕಾರ ದರ ನೀಡಿ ಕಬ್ಬು ಖರೀದಿಸಲಾಗುವುದು. ಕಳೆದ ಬಾರಿ ಕಡಿಮೆ ರಿಕವರಿ ಇದ್ದರೂ ರೈತರಿಗೆ 2,800 ರೂ ನೀಡಲಾಗಿದೆ” ಎಂದರು.
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, “ಸರ್ಕಾರದ ಬೆಂಬಲದಿಂದ ಕಾರ್ಖಾನೆ ಪ್ರಾರಂಭವಾಗಿದೆ. ಕಬ್ಬು ಅರೆಯುವ ಕಾರ್ಯ ಹೆಚ್ಚು ನಡೆಯುತ್ತದೆ. ಮುಂದಿನ ದಿನಗಳಲ್ಲಿ ಕಾರ್ಖಾನೆ ಉನ್ನತ ಮಟ್ಟದಲ್ಲಿ ನಡೆಯಲಿದೆ” ಎಂದರು.
“ಮೈಶುಗರ್ನಲ್ಲಿ ಕೆಲವು ಸಮಸ್ಯೆ ಮತ್ತು ಗೊಂದಲವಿದೆ. ಅವುಗಳನ್ನು ಸರಿಪಡಿಸಿಕೊಂಡು ಹೋದರೆ ಮುಂದೆ ಯಾವುದೇ ಸಮಸ್ಯೆ ಬರಲ್ಲ. 40 ಕೋಟಿ ರೂ ಕರೆಂಟ್ ಬಿಲ್ ಬಾಕಿಯ ಬಗ್ಗೆ ರಾಜ್ಯದ ಇಂಧನ ಸಚಿವರಿಗೆ ಪತ್ರ ಬರೆದು ಮನ್ನಾ ಮಾಡುವಂತೆ ಮನವಿ ಮಾಡುತ್ತೇನೆ” ಎಂದು ಸಂಸದೆ ಸುಮಾಲತಾ ತಿಳಿಸಿದರು.
ಶಾಸಕ ಗಣಿಗ ರವಿಕುಮಾರ್, ರಮೇಶ್ ಬಾಬು ಬಂಡಿಸಿದ್ದೇ ಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್, ಎಸ್ಪಿ ಎನ್. ಯತೀಶ್ ಸೇರಿ ರೈತ ನಾಯಕರು ಭಾಗಿಯಾಗಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…