ಮಂಡ್ಯ: ಮಂಡ್ಯದ ಮೈಶುಗರ್ ಕಾರ್ಖಾನೆ, ಸರ್ಕಾರಿ ಸ್ವಾಮ್ಯದ ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ. ಇಲ್ಲಿ ಪ್ರಸಕ್ತ ಸಾಲಿನ ಹಂಗಾಮಿನ ಕಬ್ಬು ನುರಿಸುವ ಕಾರ್ಯಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಕಾರ್ಖಾನೆ ಪುನರಾರಂಭದ ಭರವಸೆಯನ್ನು ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಕೊಟ್ಟಿತ್ತು. ಅದರಂತೆಯೇ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸಿಎಂ ಸಿದ್ದರಾಮಯ್ಯ 50 ಕೋಟಿ ರೂ ಅನುದಾನ ಬಿಡುಗಡೆ ಮಾಡಿದ್ದರು. ಅನುದಾನ ಬಿಡುಗಡೆಯಾದ ವಾರದಲ್ಲಿಯೇ ಕಾರ್ಖಾನೆ ಬಾಯ್ಲರ್ಗೆ ಅಗ್ನಿಸ್ಪರ್ಶವನ್ನೂ ಮಾಡಲಾಗಿತ್ತು. ಇದೀಗ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ ಕಾರ್ಖಾನೆ ಅಧಿಕೃತವಾಗಿ ಪುನರಾರಂಭವಾಗಿದೆ.
ಕಾರ್ಖಾನೆ ಆವರಣದಲ್ಲಿ ಮೊದಲು ದೇವರಿಗೆ ಪೂಜೆ ಸಲ್ಲಿಸಲಾಯಿತು. ನಂತರ ಸಕ್ಕರೆ ಸಚಿವ ಶಿವಾನಂದ ಎಸ್. ಪಾಟೀಲ್ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಸಚಿವ ಶಿವಾನಂದ ಪಾಟೀಲ್ ಮಾತನಾಡಿ, “ಪ್ರಸಕ್ತ ಸಾಲಿನ ಹಂಗಾಮಿನಲ್ಲಿ ಪ್ರತಿದಿನ 3 ಸಾವಿರ ಟನ್ ಕಬ್ಬು ನುರಿಸುವ ಗುರಿ ಇದೆ. ಕಾರ್ಖಾನೆಯಲ್ಲಿ ಕಬ್ಬು ನುರಿಯುವ ಕಾರ್ಯಕ್ಕೆ ಕೆಲವು ದಿನ ಟರ್ಬೈನ್ ಸಮಸ್ಯೆಯಿಂದ ತಡವಾಯಿತು. ಗುರುವಾರ ಮತ್ತು ಶುಕ್ರವಾರ 1,500 ರಿಂದ 2,000 ಟನ್ ಕಬ್ಬು ನುರಿಸಲಾಗುವುದು. ಕಾಲಕ್ರಮೇಣ 3 ಸಾವಿರ ಟನ್ನಿಂದ 5 ಸಾವಿರ ಟನ್ವರೆಗೂ ನುರಿಯುವ ಕೆಲಸ ನಡೆಯಲಿದೆ. ರೈತರಿಗೆ ಎಫ್ಆರ್ಪಿ ಪ್ರಕಾರ ದರ ನೀಡಿ ಕಬ್ಬು ಖರೀದಿಸಲಾಗುವುದು. ಕಳೆದ ಬಾರಿ ಕಡಿಮೆ ರಿಕವರಿ ಇದ್ದರೂ ರೈತರಿಗೆ 2,800 ರೂ ನೀಡಲಾಗಿದೆ” ಎಂದರು.
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, “ಸರ್ಕಾರದ ಬೆಂಬಲದಿಂದ ಕಾರ್ಖಾನೆ ಪ್ರಾರಂಭವಾಗಿದೆ. ಕಬ್ಬು ಅರೆಯುವ ಕಾರ್ಯ ಹೆಚ್ಚು ನಡೆಯುತ್ತದೆ. ಮುಂದಿನ ದಿನಗಳಲ್ಲಿ ಕಾರ್ಖಾನೆ ಉನ್ನತ ಮಟ್ಟದಲ್ಲಿ ನಡೆಯಲಿದೆ” ಎಂದರು.
“ಮೈಶುಗರ್ನಲ್ಲಿ ಕೆಲವು ಸಮಸ್ಯೆ ಮತ್ತು ಗೊಂದಲವಿದೆ. ಅವುಗಳನ್ನು ಸರಿಪಡಿಸಿಕೊಂಡು ಹೋದರೆ ಮುಂದೆ ಯಾವುದೇ ಸಮಸ್ಯೆ ಬರಲ್ಲ. 40 ಕೋಟಿ ರೂ ಕರೆಂಟ್ ಬಿಲ್ ಬಾಕಿಯ ಬಗ್ಗೆ ರಾಜ್ಯದ ಇಂಧನ ಸಚಿವರಿಗೆ ಪತ್ರ ಬರೆದು ಮನ್ನಾ ಮಾಡುವಂತೆ ಮನವಿ ಮಾಡುತ್ತೇನೆ” ಎಂದು ಸಂಸದೆ ಸುಮಾಲತಾ ತಿಳಿಸಿದರು.
ಶಾಸಕ ಗಣಿಗ ರವಿಕುಮಾರ್, ರಮೇಶ್ ಬಾಬು ಬಂಡಿಸಿದ್ದೇ ಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್, ಎಸ್ಪಿ ಎನ್. ಯತೀಶ್ ಸೇರಿ ರೈತ ನಾಯಕರು ಭಾಗಿಯಾಗಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…