ಜನ ಮನದ ನಾಡಿ ಮಿಡಿತ

Advertisement

ಹಾಡಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ

ಸರಗೂರು- ತಾಲೋಕಿನ ಕೂಡುಗಿ ಹಾಡಿಯಲ್ಲಿ ಹಾಡಿ ಸಭೆಮಾಡಿ ಸೀಮಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕೂಡುಗಿ ಹಾಡಿ ಸರಗೂರು ತಾಲೂಕಿನ ಕಾಡಂಚಿನ ಹಾಡಿಯಾಗಿದ್ದು ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸರಗೂರು, ಆಶ್ರಯ ಹಸ್ತ ಟ್ರಸ್ಟ್, ಬೆಂಗಳೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬಡಗಲಪುರ ಹಾಗೂ ಸಮುದಾಯ ಸಹಭಾಗಿತ್ವದಿಂದ ಕೂಡುಗಿ ಹಾಡಿಯಲ್ಲಿ ಹಾಡಿ ಸಭೆಯನ್ನು ಹಮ್ಮಿಕೊಂಡು ಆದಿವಾಸಿ ಮೂರು ಜನ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಮಾಡಲಾಯಿತು.

ಸಂಸ್ಥೆಯ ಸ್ಥಾಪಕರಾದ ವೆಂಕಟಸ್ವಾಮಿ ಮಾತಾನಾಡಿ ಅಂಗನವಾಡಿ ಕಟ್ಟಡವಿಲ್ಲದೆ ಇದ್ದು ಸರ್ಕಾರದ ಜೊತೆ ಸಾಕಷ್ಟು ಅರ್ಜಿಗಳನ್ನು ಸತತವಾಗಿ ಕೊಟ್ಟು ಸತತ ಪ್ರಯತ್ನದಿಂದ ಈ ಹಾಡಿಯಲ್ಲಿ ನೂತನವಾಗಿ ಅಂಗನವಾಡಿ ಕೇಂದ್ರದ ಕಟ್ಟಡ ಕಾಮಗಾರಿ ಆಗುತ್ತಿರುವ ಬಗ್ಗೆ ಚರ್ಚಿಸಲಾಯಿತು ಮತ್ತು
ತಾಯಿ ಮತ್ತು ಮಕ್ಕಳ ಆರೋಗ್ಯ ಉತ್ತಮ ಪಡಿಸಲು ಗರ್ಭಿಣಿಯರು ಪೌಷ್ಟಿಕ ಆಹಾರದ ಸೇವನೆ ಜೊತೆಗೆ ಆಸ್ಪತ್ರೆಯ ಹೆರಿಗೆಯ ಅನುಕೂಲಗಳ ಬಗ್ಗೆ ವಿವರವಾಗಿ ತಿಳಿಸಿದರು.

ಕಾರ್ಯಕ್ರಮಕ್ಕೆ ಸಂಸ್ಥೆಯ ಸ್ಥಾಪಕರಾದ ವೆಂಕಟಸ್ವಾಮಿ ಹಾಡಿಯ ಯಜಮಾನರಾದ ಮಾಣಬ, ಆಶಾ ಕಾರ್ಯಕರ್ತೆಯರಾದ ಶಶಿಕಲಾ, ಸಂಸ್ಥೆಯ ಮೇಲ್ವಿಚಾರಕಾರದ ಜಯರಾಮ್, ಆರೋಗ್ಯ ಕಾರ್ಯಕರ್ತರಾದ ಮಹೇಶ ಬಿ, ಹಾಡಿಯ ಗರ್ಭಿಣಿಯರು ಹಾಗೂ ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!