ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಡೆತ್ ನೋಟ್ ಬರೆದಿಟ್ಟು ಮಹಿಳೆ ನೇಣಿಗೆ ಶರಣು

ಉಡುಪಿ: ಮಾನಸಿಕವಾಗಿ ನೊಂದ ಮಹಿಳೆಯೊರ್ವಳು ಮನೆಯ ಅಡಿಗೆ ಮನೆಯ ಮಾಡಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಂಗ್ರಪಾಡಿಯ ಸಾಯಿಬಾಬ ಮಂದಿರದ ಬಳಿ ನಡೆದಿದೆ.

ಕೊರಂಗ್ರಪಾಡಿಯ ಸಾಯಿಬಾಬ ಮಂದಿರದ ಬಳಿಯ ನಿವಾಸಿ ಭಾರತಿ ಶೆಟ್ಟಿಗಾರ್ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ನೇಕಾರಿಕೆ ಕೆಲಸ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ನೆರೆಮನೆಯವರಿಗೆ ಪೋನ್ ಕರೆ ಮಾಡಿ ತಿಳಿಸಿದ್ದರು. ಆದರೆ, ನೆರೆಮನೆಯವರು ಬಂದು ನೋಡುವಾಗ ಭಾರತಿ ಅವರು ಮೃತಪಟ್ಟಿದ್ದರು.
ಮೃತದೇಹದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ 500 ರೂ ಬೈಲೂರು ಮಹಿಷಿಮರ್ಧಿನಿ ದೇವಸ್ಥಾನದಲ್ಲಿ ನಡೆಯುವ ಹೂವಿನ ಪೂಜೆಗೆ ಮತ್ತು 200 ರೂಪಾಯಿ ದಿನ ಪತ್ರಿಕೆಯ ತಿಂಗಳ ಬಿಲ್ಲು ಪಾವತಿಸಬೇಕು. ಹಾಗೆಯೇ ಗಂಡನ ಪೋಷಣೆಗೆ ನನ್ನ ಚಿನ್ನ, ಹಣ ಸಾಕು ಎಂದು ಬರೆಯಲಾಗಿದೆ.
ಘಟನಾಸ್ಥಳಕ್ಕೆ ಎ.ಎಸ್.ಐ ವಿಜಯ, ತನಿಖಾ ಸಹಾಯಕರಾಗಿರುವ ನೇತ್ರ, ಶಿವಕುಮಾರ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಅಜ್ಜರಕಾಡಿನ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು, ಉಚಿತ ಆ್ಯಂಬುಲೆನ್ಸ್ ಸೇವೆ ನೀಡಿ ಇಲಾಖೆಗೆ ನೆರವಾದರು.

Leave a Reply

Your email address will not be published. Required fields are marked *

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

error: Content is protected !!