ಉಡುಪಿ: ಮಾನಸಿಕವಾಗಿ ನೊಂದ ಮಹಿಳೆಯೊರ್ವಳು ಮನೆಯ ಅಡಿಗೆ ಮನೆಯ ಮಾಡಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಂಗ್ರಪಾಡಿಯ ಸಾಯಿಬಾಬ ಮಂದಿರದ ಬಳಿ ನಡೆದಿದೆ.
ಕೊರಂಗ್ರಪಾಡಿಯ ಸಾಯಿಬಾಬ ಮಂದಿರದ ಬಳಿಯ ನಿವಾಸಿ ಭಾರತಿ ಶೆಟ್ಟಿಗಾರ್ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ನೇಕಾರಿಕೆ ಕೆಲಸ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ನೆರೆಮನೆಯವರಿಗೆ ಪೋನ್ ಕರೆ ಮಾಡಿ ತಿಳಿಸಿದ್ದರು. ಆದರೆ, ನೆರೆಮನೆಯವರು ಬಂದು ನೋಡುವಾಗ ಭಾರತಿ ಅವರು ಮೃತಪಟ್ಟಿದ್ದರು.
ಮೃತದೇಹದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ 500 ರೂ ಬೈಲೂರು ಮಹಿಷಿಮರ್ಧಿನಿ ದೇವಸ್ಥಾನದಲ್ಲಿ ನಡೆಯುವ ಹೂವಿನ ಪೂಜೆಗೆ ಮತ್ತು 200 ರೂಪಾಯಿ ದಿನ ಪತ್ರಿಕೆಯ ತಿಂಗಳ ಬಿಲ್ಲು ಪಾವತಿಸಬೇಕು. ಹಾಗೆಯೇ ಗಂಡನ ಪೋಷಣೆಗೆ ನನ್ನ ಚಿನ್ನ, ಹಣ ಸಾಕು ಎಂದು ಬರೆಯಲಾಗಿದೆ.
ಘಟನಾಸ್ಥಳಕ್ಕೆ ಎ.ಎಸ್.ಐ ವಿಜಯ, ತನಿಖಾ ಸಹಾಯಕರಾಗಿರುವ ನೇತ್ರ, ಶಿವಕುಮಾರ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಅಜ್ಜರಕಾಡಿನ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು, ಉಚಿತ ಆ್ಯಂಬುಲೆನ್ಸ್ ಸೇವೆ ನೀಡಿ ಇಲಾಖೆಗೆ ನೆರವಾದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…