ಉಡುಪಿ: ಮಾನಸಿಕವಾಗಿ ನೊಂದ ಮಹಿಳೆಯೊರ್ವಳು ಮನೆಯ ಅಡಿಗೆ ಮನೆಯ ಮಾಡಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಂಗ್ರಪಾಡಿಯ ಸಾಯಿಬಾಬ ಮಂದಿರದ ಬಳಿ ನಡೆದಿದೆ.
ಕೊರಂಗ್ರಪಾಡಿಯ ಸಾಯಿಬಾಬ ಮಂದಿರದ ಬಳಿಯ ನಿವಾಸಿ ಭಾರತಿ ಶೆಟ್ಟಿಗಾರ್ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ನೇಕಾರಿಕೆ ಕೆಲಸ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ನೆರೆಮನೆಯವರಿಗೆ ಪೋನ್ ಕರೆ ಮಾಡಿ ತಿಳಿಸಿದ್ದರು. ಆದರೆ, ನೆರೆಮನೆಯವರು ಬಂದು ನೋಡುವಾಗ ಭಾರತಿ ಅವರು ಮೃತಪಟ್ಟಿದ್ದರು.
ಮೃತದೇಹದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ 500 ರೂ ಬೈಲೂರು ಮಹಿಷಿಮರ್ಧಿನಿ ದೇವಸ್ಥಾನದಲ್ಲಿ ನಡೆಯುವ ಹೂವಿನ ಪೂಜೆಗೆ ಮತ್ತು 200 ರೂಪಾಯಿ ದಿನ ಪತ್ರಿಕೆಯ ತಿಂಗಳ ಬಿಲ್ಲು ಪಾವತಿಸಬೇಕು. ಹಾಗೆಯೇ ಗಂಡನ ಪೋಷಣೆಗೆ ನನ್ನ ಚಿನ್ನ, ಹಣ ಸಾಕು ಎಂದು ಬರೆಯಲಾಗಿದೆ.
ಘಟನಾಸ್ಥಳಕ್ಕೆ ಎ.ಎಸ್.ಐ ವಿಜಯ, ತನಿಖಾ ಸಹಾಯಕರಾಗಿರುವ ನೇತ್ರ, ಶಿವಕುಮಾರ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಅಜ್ಜರಕಾಡಿನ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು, ಉಚಿತ ಆ್ಯಂಬುಲೆನ್ಸ್ ಸೇವೆ ನೀಡಿ ಇಲಾಖೆಗೆ ನೆರವಾದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…