ಜನ ಮನದ ನಾಡಿ ಮಿಡಿತ

Advertisement

ರಘುಪತಿ ಭಟ್ ಬಂಡಾಯವಾಗಿ ಸ್ಪರ್ಧಿಸಲ್ಲ ಎಂಬ ವಿಶ್ವಾಸವಿದೆ: ಡಾ.ಧನಂಜಯ ಸರ್ಜಿ

ಉಡುಪಿ: ಮಾಜಿ ಶಾಸಕ ರಘುಪತಿ ಭಟ್ ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿಲುವು ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸ ಇದೆ. ಮತ್ತೆ ಅವರು ಪಕ್ಷದ ಜೊತೆ ಸೇರಿಕೊಳ್ಳುತ್ತಾರೆ ಎಂದು ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹೇಳಿದ್ದಾರೆ.

ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ರಘುಪತಿ ಭಟ್ ಅವರ ಬಗ್ಗೆ ಬಹಳ ಗೌರವ ಇದೆ. ಅವರು ಪಕ್ಷ ನಿಷ್ಠೆಯಿಂದ ನಡೆದುಕೊಂಡು ಬಂದವರು. ಅವರೊಂದಿಗೆ ಪಕ್ಷದ ಮುಖಂಡರು ಮಾತುಕತೆ ನಡೆಸಲಿದ್ದಾರೆ ಎಂದರು.
ಸಂಘಪರಿವಾರದ ವಿರುದ್ಧ ಚಳವಳಿ ನಡೆಸಿದ್ದಾರೆಂಬ ರಘುಪತಿ ಭಟ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸರ್ಜಿ ಅವರು, ನಾನು ಆರ್‌ಎಸ್‌ಎಸ್ ವಿರುದ್ಧ ಯಾವುದೇ ಚಳವಳಿ ಮಾಡಿಲ್ಲ. ನಾನು ಆರ್‌ಎಸ್‌ಎಸ್‌ನ ನಿಷ್ಟಾವಂತ ಸ್ವಯಂ ಸೇವಕನಾಗಿದ್ದೇನೆ. ಶಿವಮೊಗ್ಗದ ಗಲಭೆಗೆ ಸಂಬಂಧಿಸಿ ಎಲ್ಲ ಧರ್ಮಗಳ ಗುರುಗಳು ಸೇರಿ ಶಾಂತಿಗಾಗಿ ನಡೆಸಿದ ಮೆರವಣಿಗೆಯಲ್ಲಿ ನಾನು ಭಾಗವಹಿಸಿದ್ದೇನೆ ಹೊರತು ಯಾವುದೇ ಸಂಘಟನೆಯ ವಿರುದ್ಧ ಅಲ್ಲ ಎಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಭೋಜೇಗೌಡ, ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಮಾಜಿ ಅಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಡಿ.ಎಸ್.ಅರುಣ್, ದಿನಕರ ಶೆಟ್ಟಿ, ಶಿಲ್ಪಾ ಸುವರ್ಣ, ಮಟ್ಟಾರ್ ರತ್ನಾಕರ್ ಹೆಗ್ಡೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!