ಜನ ಮನದ ನಾಡಿ ಮಿಡಿತ

Advertisement

ಸುಬ್ರಹ್ಮಣ್ಯ: ಗಾಳಿ – ಮಳೆಗೆ ಮರ ಬಿದ್ದು ವೃದ್ಧೆ ಸಾವು..!

ಗಾಳಿ – ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ.

ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬಸವನಮೂಲೆ ನಿವಾಸಿ ದಿ|ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ (65) ಮೃತ ದುರ್ದೈವಿ. ಮೀನಾಕ್ಷಿ ಅವರು ತಮ್ಮ ತೋಟದಲ್ಲಿ ಕಟ್ಟಿದ್ದ ದನವನ್ನು ಬಿಡಿಸಿ ತರಲು ಸಂಜೆ ತೆರಳಿದ್ದ ಸಮಯ ಗಾಳಿ-ಮಳೆಗೆ ತೋಟದಲ್ಲಿನ ಉಪ್ಪಳಿಗೆ ಮರವೊಂದು ಇವರ ಮೇಲೆ ಮುರಿದು ಬಿದ್ದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮೀನಾಕ್ಷಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಕಡಬ ಕಂದಾಯ ನಿರೀಕ್ಷಕ ಪ್ರಥ್ವಿರಾಜ್ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!