ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕ, ರೋಟರಿ ಕ್ಲಬ್ ಬಂಟ್ವಾಳ, ಉಪ್ಪಿನಂಗಡಿ, ಬಂಟ್ವಾಳ ಟೌನ್ ಹಾಗೂ ವಿಟ್ಲ ಘಟಕದ ಸಹಯೋಗದಲ್ಲಿ ಮೆಹ್’ಫಿಲೇ ಈದ್ ಕಾರ್ಯಕ್ರಮವು ಮೇ 17 ಶುಕ್ರವಾರ ಸಂಜೆ 05.30ಕ್ಕೆ ಮಾಣಿ ಜನಪ್ರಿಯ ಗಾರ್ಡನ್ಸ್ ನಲ್ಲಿ ನಡೆಯಲಿದೆ.
ಎನ್ನಾರೈ ಉದ್ಯಮಿ, ಸಂಘಟಕ ಝಕರಿಯಾ ಜೋಕಟ್ಟೆ ಅಲ್ ಮುಝೈನ್, ಶಿಕ್ಷಣ ಹರಿಕಾರ, ಸಾಂಸ್ಕೃತಿಕ ಸಂಘಟಕ ಡಾ. ಎಂ. ಮೋಹನ್ ಆಳ್ವ, ಮಂಗಳೂರು ಉದ್ಯಮಿ, ಸೇವಾಕರ್ತೃ ರೋಹನ್ ಮೊಂತೇರೋ ಅವರಿಗೆ ಈದ್ ಅವಾರ್ಡ್ ನೀಡಿ ಗೌರವಿಸಲಾಗುವುದು. ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಈದ್ ಸಂದೇಶ ನೀಡುವರು. ರೋಟರಿ ಜಿಲ್ಲಾ ನಿಯೋಜಿತ ಗವರ್ನರ್ ವಿಕ್ರಮ್ ದತ್ತ ಪ್ರಶಸ್ತಿ ವಿತರಿಸುವರು. ಸುಲ್ತಾನ್ ಗೋಲ್ಡ್ ಎಂ.ಡಿ. ಡಾ. ಅಬ್ದುಲ್ ರವೂಫ್, ಜನಪ್ರಿಯ ಗ್ರೂಪ್ಸ್ ಎಂ.ಡಿ. ಡಾ. ಅಬ್ದುಲ್ ಬಶೀರ್ ವಿ.ಕೆ., ಜಮೀಯ್ಯತುಲ್ ಫಲಾಹ್ ಜಿಲ್ಲಾಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಹಾಗೂ ಡ್ರೀಮ್ ಎಸೋಸಿಯೇಟ್ಸ್ ಎಂ.ಡಿ. ಝುಬೈರ್ ಬುಳೇರಿಕಟ್ಟೆ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಇಬ್ರಾಹಿಂ ಬಾತಿಷ ತಂಡದ ಗಾಯನ, ಕೇರಳ ಕಣ್ಣೂರು ಕಲಾ ವೇದಿ ತಂಡದ ದಫ್, ಕೋಲ್ಕಳಿ, ಮುಟ್ಟ್, ಸೂಫಿ, ಅರಬಿಕ್ ನೃತ್ಯಗಳ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಅಲ್ ಮುಝೈನ್ ಜುಬೈಲ್, ಸುಲ್ತಾನ್ ಡೈಮಂಡ್ಸ್ ಮತ್ತು ಗೋಲ್ಡ್, ಡ್ರೀಮ್ ಎಸೋಸಿಯೇಟ್ಸ್, ಜನಪ್ರಿಯ ಗಾರ್ಡನ್ಸ್, ರಿಫಾಯಿ ಟ್ರೇಡಿಂಗ್ ಕಂಪೆನಿ ಹಾಗೂ ಆನಿಯಾ ದರ್ಬಾರ್ ಗ್ರೂಪ್ ಆಫ್ ಹೋಟೆಲ್ಸ್ ಸಹಕಾರ ನೀಡಲಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…