ಉಡುಪಿ: 1890-1947ರ ಅವಧಿಯ ಭಿತ್ತಿಪತ್ರ, ಬಟ್ಟೆ ಲೇಬಲ್, ಬೆಂಕಿ ಪೊಟ್ಟಣದ ಮೇಲಿನ ಲೇಬಲ್ಗಳ ಕಲ್ಲಚ್ಚು ಕಲಾ ಪ್ರದರ್ಶನವನ್ನು ಕುಂಜಿಬೆಟ್ಟುವಿನ ಅದಿತಿ ಕಲಾ ಗ್ಯಾಲರಿಯಲ್ಲಿ ಮೇ 17ರಿಂದ 19ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಅದಿತಿ ಆರ್ಟ್ ಗ್ಯಾಲರಿಯ ಆಡಳಿತ ವಿಶ್ವಸ್ಥ ಡಾ. ಕಿರಣ್ ಆಚಾರ್ಯ ತಿಳಿಸಿದ್ದಾರೆ.
ಉಡುಪಿ ಕುಂಜಿಬೆಟ್ಟುವಿನ ಗ್ಯಾಲರಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೂಲ ಪ್ರತಿಗಳನ್ನು ಬಹು ಪ್ರತಿಗಳನ್ನಾಗಿ ಮಾಡುವ ಸಂಪ್ರದಾಯ ಬದ್ಧ ಕಲೆಯೇ ಕಲ್ಲಚ್ಚು. ಇದೊಂದು ಪುರಾತನ ಮುದ್ರಣ ತಂತ್ರಗಾರಿಕೆ. ಕಲ್ಲಿನ ಮೇಲೆ ಚಿತ್ರಿಸಿ ಅದನ್ನು ರಾಸಾಯನಿಕ ಪ್ರಕ್ರಿಯೆಗೆ ಒಳಪಡಿಸಿ ಅದರ ಮೂಲಕ ಚಿತ್ರ ಪ್ರತಿಗಳನ್ನು ತೆಗೆಯುವ ಕಲೆ. ಪುರಾತನ ಕಲ್ಲಚ್ಚು ಕಲಾಕೃತಿಗಳ ಸಂರಕ್ಷಣೆ, ಅಧ್ಯಯನ ಮತ್ತು ಸಾಮಾಜಿಕ ಬದಲಾವಣೆಗಳ ದಾಖಲೀಕರಣ ಈ ಪ್ರದರ್ಶನದ ಉದ್ದೇಶವಾಗಿದೆ ಎಂದರು.
ಮೇ 17ರಂದು ಬೆಳಿಗ್ಗೆ 10.30ಕ್ಕೆ ಮುದ್ರಣ ಕ್ಷೇತ್ರದ ಉದ್ಯಮಿ ಮಂಗಳೂರಿನ ನೇಮಿರಾಜ್ ಶೆಟ್ಟಿ ಕಲಾ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಲಾವಿದ ಡಾ.ಜನಾರ್ದನ ಹಾವಂಜೆ ಭಾಗವಹಿಸಲಿದ್ದಾರೆ. ಬೆಳಗ್ಗೆ 11ರಿಂದ ಸಂಜೆ 7ರವರೆಗೆ ಕಲಾಕೃತಿಗಳ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಗ್ಯಾಲರಿಯ ವಿಶ್ವಸ್ಥರಾದ ಶ್ರೀನಿವಾಸ, ಪ್ರವೀಣಾ ಮೋಹನ್ ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…