ಉಡುಪಿ: 1890-1947ರ ಅವಧಿಯ ಭಿತ್ತಿಪತ್ರ, ಬಟ್ಟೆ ಲೇಬಲ್, ಬೆಂಕಿ ಪೊಟ್ಟಣದ ಮೇಲಿನ ಲೇಬಲ್ಗಳ ಕಲ್ಲಚ್ಚು ಕಲಾ ಪ್ರದರ್ಶನವನ್ನು ಕುಂಜಿಬೆಟ್ಟುವಿನ ಅದಿತಿ ಕಲಾ ಗ್ಯಾಲರಿಯಲ್ಲಿ ಮೇ 17ರಿಂದ 19ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಅದಿತಿ ಆರ್ಟ್ ಗ್ಯಾಲರಿಯ ಆಡಳಿತ ವಿಶ್ವಸ್ಥ ಡಾ. ಕಿರಣ್ ಆಚಾರ್ಯ ತಿಳಿಸಿದ್ದಾರೆ.
ಉಡುಪಿ ಕುಂಜಿಬೆಟ್ಟುವಿನ ಗ್ಯಾಲರಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೂಲ ಪ್ರತಿಗಳನ್ನು ಬಹು ಪ್ರತಿಗಳನ್ನಾಗಿ ಮಾಡುವ ಸಂಪ್ರದಾಯ ಬದ್ಧ ಕಲೆಯೇ ಕಲ್ಲಚ್ಚು. ಇದೊಂದು ಪುರಾತನ ಮುದ್ರಣ ತಂತ್ರಗಾರಿಕೆ. ಕಲ್ಲಿನ ಮೇಲೆ ಚಿತ್ರಿಸಿ ಅದನ್ನು ರಾಸಾಯನಿಕ ಪ್ರಕ್ರಿಯೆಗೆ ಒಳಪಡಿಸಿ ಅದರ ಮೂಲಕ ಚಿತ್ರ ಪ್ರತಿಗಳನ್ನು ತೆಗೆಯುವ ಕಲೆ. ಪುರಾತನ ಕಲ್ಲಚ್ಚು ಕಲಾಕೃತಿಗಳ ಸಂರಕ್ಷಣೆ, ಅಧ್ಯಯನ ಮತ್ತು ಸಾಮಾಜಿಕ ಬದಲಾವಣೆಗಳ ದಾಖಲೀಕರಣ ಈ ಪ್ರದರ್ಶನದ ಉದ್ದೇಶವಾಗಿದೆ ಎಂದರು.
ಮೇ 17ರಂದು ಬೆಳಿಗ್ಗೆ 10.30ಕ್ಕೆ ಮುದ್ರಣ ಕ್ಷೇತ್ರದ ಉದ್ಯಮಿ ಮಂಗಳೂರಿನ ನೇಮಿರಾಜ್ ಶೆಟ್ಟಿ ಕಲಾ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಲಾವಿದ ಡಾ.ಜನಾರ್ದನ ಹಾವಂಜೆ ಭಾಗವಹಿಸಲಿದ್ದಾರೆ. ಬೆಳಗ್ಗೆ 11ರಿಂದ ಸಂಜೆ 7ರವರೆಗೆ ಕಲಾಕೃತಿಗಳ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಗ್ಯಾಲರಿಯ ವಿಶ್ವಸ್ಥರಾದ ಶ್ರೀನಿವಾಸ, ಪ್ರವೀಣಾ ಮೋಹನ್ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…