ಉಡುಪಿ: 1890-1947ರ ಅವಧಿಯ ಭಿತ್ತಿಪತ್ರ, ಬಟ್ಟೆ ಲೇಬಲ್, ಬೆಂಕಿ ಪೊಟ್ಟಣದ ಮೇಲಿನ ಲೇಬಲ್ಗಳ ಕಲ್ಲಚ್ಚು ಕಲಾ ಪ್ರದರ್ಶನವನ್ನು ಕುಂಜಿಬೆಟ್ಟುವಿನ ಅದಿತಿ ಕಲಾ ಗ್ಯಾಲರಿಯಲ್ಲಿ ಮೇ 17ರಿಂದ 19ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಅದಿತಿ ಆರ್ಟ್ ಗ್ಯಾಲರಿಯ ಆಡಳಿತ ವಿಶ್ವಸ್ಥ ಡಾ. ಕಿರಣ್ ಆಚಾರ್ಯ ತಿಳಿಸಿದ್ದಾರೆ.
ಉಡುಪಿ ಕುಂಜಿಬೆಟ್ಟುವಿನ ಗ್ಯಾಲರಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೂಲ ಪ್ರತಿಗಳನ್ನು ಬಹು ಪ್ರತಿಗಳನ್ನಾಗಿ ಮಾಡುವ ಸಂಪ್ರದಾಯ ಬದ್ಧ ಕಲೆಯೇ ಕಲ್ಲಚ್ಚು. ಇದೊಂದು ಪುರಾತನ ಮುದ್ರಣ ತಂತ್ರಗಾರಿಕೆ. ಕಲ್ಲಿನ ಮೇಲೆ ಚಿತ್ರಿಸಿ ಅದನ್ನು ರಾಸಾಯನಿಕ ಪ್ರಕ್ರಿಯೆಗೆ ಒಳಪಡಿಸಿ ಅದರ ಮೂಲಕ ಚಿತ್ರ ಪ್ರತಿಗಳನ್ನು ತೆಗೆಯುವ ಕಲೆ. ಪುರಾತನ ಕಲ್ಲಚ್ಚು ಕಲಾಕೃತಿಗಳ ಸಂರಕ್ಷಣೆ, ಅಧ್ಯಯನ ಮತ್ತು ಸಾಮಾಜಿಕ ಬದಲಾವಣೆಗಳ ದಾಖಲೀಕರಣ ಈ ಪ್ರದರ್ಶನದ ಉದ್ದೇಶವಾಗಿದೆ ಎಂದರು.
ಮೇ 17ರಂದು ಬೆಳಿಗ್ಗೆ 10.30ಕ್ಕೆ ಮುದ್ರಣ ಕ್ಷೇತ್ರದ ಉದ್ಯಮಿ ಮಂಗಳೂರಿನ ನೇಮಿರಾಜ್ ಶೆಟ್ಟಿ ಕಲಾ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಲಾವಿದ ಡಾ.ಜನಾರ್ದನ ಹಾವಂಜೆ ಭಾಗವಹಿಸಲಿದ್ದಾರೆ. ಬೆಳಗ್ಗೆ 11ರಿಂದ ಸಂಜೆ 7ರವರೆಗೆ ಕಲಾಕೃತಿಗಳ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಗ್ಯಾಲರಿಯ ವಿಶ್ವಸ್ಥರಾದ ಶ್ರೀನಿವಾಸ, ಪ್ರವೀಣಾ ಮೋಹನ್ ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…