ಹುಣಸೂರು: ತಾಲೂಕಿನ ಅರಸು ಕಲ್ಲಳ್ಳಿ ಬಳಿ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ, ಘಟನೆಯಲ್ಲಿ ಎರಡು ಬಸ್ಗಳು ಹಾಗೂ ಎರಡು ಕಾರುಗಳಿಗೆ ತೀವ್ರ ಜಖಂ ಆಗಿದೆ.
ಮೈಸೂರು-ಬಂಟ್ವಾಳ ಹೆದ್ದಾರಿ-275ರ ಅರಸು ಕಲ್ಲಹಳ್ಳಿ ಗೇಟ್ ಬಳಿಯಲ್ಲಿ ಘಟನೆ ನಡೆದಿದ್ದು, ಮೈಸೂರು ತಾಲೂಕಿನ ಹೂಟಗಳ್ಳಿಯ ಎಸ್ಆರ್ಎಸ್ ಕಾಲೋನಿಯ ಲೇ.ಬೈರಪ್ಪರ ಪುತ್ರ , ಕೂಲಿ ಕಾರ್ಮಿಕ ಕರಿಯಪ್ಪ(40) ಮೃತಪಟ್ಟಾತ, ಇವರಿಗೆ ಪತ್ನಿ, ಪುಟ್ಟ ಮಕ್ಕಳಿದ್ದಾರೆ.
ಕರಿಯಪ್ಪ ಹುಣಸೂರು ತಾಲೂಕಿನ ಅತ್ತಿಕುಪ್ಪೆಯಲ್ಲಿ ಬುಧವಾರ ನಡೆದ ಗ್ರಾಮದ ಹಬ್ಬದಲ್ಲಿ ಬಾಗವಹಿಸಿ ಸಂಜೆ 6.30ರ ವೇಳೆಗೆ ವಾಪಸ್ ಆಗುತ್ತಿದ್ದ ವೇಳೆ ಅರಸು ಕಲ್ಲಹಳ್ಳಿ ಬಳಿ ಹುಣಸೂರು ಡಿಪೋಗೆ ಸೇರಿದ ಬಸ್ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಬಸ್ಗೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಿಂದ ಗಾಬರಿಗೊಂಡ ಬಸ್ ಚಾಲಕ ಒಮ್ಮೆಲೆ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ಬರುತ್ತಿದ್ದ ಇನ್ನೋವಾ ಕಾರು ಬಸ್ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಇದರ ಹಿಂದೆ ಬರುತ್ತಿದ್ದ ಬೆಂಜ್ ಕಾರು ಇನ್ನೋವಾ ಕಾರಿಗೆ ಹಾಗೂ ಹಿಂದೆ ಬರುತ್ತಿದ್ದ ಮತ್ತೊಂದು ಸರಕಾರಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಎಲ್ಲಾ ವಾಹನಗಳಿಗೂ ಜಖಂಗೊಂಡಿದ್ದು. ಎಲ್ಲರೂ
ಸಣ್ಣಪುಟ್ಟಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…