ಸರಗೂರು :ತಾಲ್ಲೂಕಿನ ಹಾದನೂರು ಗ್ರಾಪಂ ವ್ಯಾಪ್ತಿಯ ಹಾದನೂರು ಗ್ರಾಮದಲ್ಲಿ ಬುಧವಾರ ರಾತ್ರಿ ದಾಳಿ ನಡೆಸಿರುವ ಕಾಡಾನೆಗಳು ರೈತರ ಬಾಳೆ ತೋಟವನ್ನು ತುಳಿದು ನಾಶ ಮಾಡಿವೆ.
ಹಾದನೂರು ಗ್ರಾಮದ ಪ್ರಕಾಶ್ ಅವರ ತೋಟಗಳಲ್ಲಿ ಮೂರು ಕಾಡಾನೆಗಳು ಸಂಚರಿಸಿ ಬಾಳೆಗಿಡಗಳನ್ನು ತಿಂದು ನಾಶ ಮಾಡಿವೆ, ತೋಟಗಳಲ್ಲಿಯೇ ಲದ್ದಿ ಹಾಕಿ ಹೋಗಿವೆ.
ಕಳೆದ ಕೆಲವು ದಿನಗಳ ಹಿಂದೆಯೂ ಈಭಾಗದಲ್ಲಿ ಕಾಡಾನೆಗಳು ದಾಳಿ ನಡೆಸಿ 1 ಎಕರೆ ಜಮೀನಿನಲ್ಲಿ ಬಾಳೆ ಹಾಕಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು, ಮತ್ತೇ ಕಾಡಾನೆ ದಾಳಿ ಗ್ರಾಮದಲ್ಲಿ ಮುಂದುವರೆದಿದ್ದು ಗ್ರಾಮಸ್ಥರು ಬೆಳೆ ಕಳೆದುಕೊಂಡು ನಷ್ಟ ಅನುಭವಿಸುವಂತಾಗಿದೆ.
ಕಾಡಾನೆಗಳ ಸ್ಥಳಾಂತರಕ್ಕೆ ಒತ್ತಾಯ
ಭಾಗದ ಕಾಡಂಚಿನ ಪಕ್ಕದಲ್ಲಿ ರೈಲು ಕಂಬಿಗಳನ್ನು ಅಳವಡಿಸಿದ್ದರು ಅದರೆ ಗುತ್ತಿಗೆದಾರ ಕಳಪೆ ಗುಣಮಟ್ಟದ ರೈಲು ಕಂಬಿಗಳನ್ನು ಅಳವಡಿಸಿ ಕಂಬಿಗಳ ಒಳಗಡೆಯಿಂದ ನುಕ್ಕಿಕೊಂಡು ಬಂದು ಬೆಳೆಗಳನ್ನು ನಾಶ ಮಾಡುತ್ತಿದ್ದೇವೆ, ಇದರಿಂದ ಪ್ರದೇಶದಲ್ಲಿ ಕಾಡಾನೆಗಳ ಉಪಟಳವಿದೆ.
ಹಳ್ಳಿಗಳಿಗೆ ಆಹಾರ ಹುಡುಕಿಕೊಂಡು ಕಾಡಾನೆಗಳು ಊರಿಗೆ ಬರುತ್ತಿದ್ದು ಬೆಳೆ ಹಾನಿ ಮಾಡಿ ರೈತರು ಕಂಗಾಲಾಗುತ್ತಿದ್ದಾರೆ. ಹಲವು ಕಡೆ ಕಾಡಾನೆ ಸಂಚಾರದಿಂದ ಗ್ರಾಮಸ್ಥರು ತೋಟದ ಕಾರ್ಮಿಕರು, ಶಾಲಾ ಮಕ್ಕಳು ಭಯ ಪಡುವಂತಾಗಿದೆ. ಅರಣ್ಯ ಅಧಿಕಾರಿಗಳು ಕಾಡಾನೆಗಳನ್ನು ಕಾಡಿಗೆ ಓಡಿಸುವುದರ ಸಿಬ್ಬಂದಿಗಳನ್ನು ಹೆಚ್ಚು ನೇಮಕ ಮಾಡಬೇಕು.ಇಲ್ಲಿ ಸಿಬ್ಬಂದಿಗಳು ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ.ಅದರಿಂದ ಕಾಡಾನೆಗಳನ್ನು ಸ್ಥಳಾಂತರ ಮಾಡುವ ಮುಖಾಂತರ ಶಾಶ್ವತ ಪರಿಹಾರ ಒದಗಿಸಿ ಕಾಡಾನೆ ಹಾವಳಿಯನ್ನು ತಡೆಗಟ್ಟಬೇಕೆಂದು ಹಾದನೂರು ಗ್ರಾಪಂ ಉಪಾಧ್ಯಕ್ಷ ಹಾದನೂರು ಪ್ರಕಾಶ್ ಒತ್ತಾಯಿಸಿದ್ದರು.
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…