ಜನ ಮನದ ನಾಡಿ ಮಿಡಿತ

Advertisement

ಕರ್ನಾಟಕ ಜಾನಪದ ಪರಿಷತ್ತು ನೇತೃತ್ವದಲ್ಲಿ ಮೇ. ೨೮ ರಂದು ರಾಜ್ಯಮಟ್ಟದ ಒಂದು ದಿನದ ಅಧ್ಯಯನ ಶಿಬಿರ

ಶಿವಮೊಗ್ಗ :-ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಸಮಿತಿ ಮತ್ತು ಕುವೆಂಪು ವಿ.ವಿ. ಕನ್ನಡ ಅಧ್ಯಾಪಕರ ವೇದಿಕೆ ಸಹಯೋಗದಲ್ಲಿ ಮೇ ೨೮ ರಂದು ಮಂಗಳವಾರ ಬೆಳಿಗ್ಗೆ 10 ರಿಂದ ಸಂಜೆಯ ವರೆಗೆ ಜಾನಪದ ದಿಕ್ಕು-ದೆಸೆ ವಿಚಾರವಾಗಿ ಒಂದು ದಿನದ ರಾಜ್ಯ ಮಟ್ಟದ ಜಾನಪದ ಅಧ್ಯಯನ ಶಿಬಿರ ಏರ್ಪಡಿಸಲಾಗಿದೆ.


‌‌‌ ಸಹ್ಯಾದ್ರಿ ವಿಜ್ಞಾನ ಕಾಲೇಜು ಆವರಣದಲ್ಲಿರುವ ಡಾ. ರಾಧಾಕೃಷ್ಣ ಸಭಾಂಗಣ ದಲ್ಲಿ ಕಾರ್ಯಕ್ರಮ ನಡೆಯಲಿದೆ. ಕುವೆಂಪು ವಿ.ವಿ. ಕುಲಪತಿಗಳಾದ ಪ್ರೊ. ಶರತ್ ಅನಂತಮೂರ್ತಿ ಉದ್ಘಾಟಿಸಲಿದ್ದಾರೆ. ಹಂಪಿ ಕನ್ನಡ ವಿ.ವಿ. ವಿಶ್ರಾಂತ ಕುಲಪತಿಗಳು, ಕರ್ನಾಟಕ ಜಾನಪದ ಪರಿಷತ್ತು ರಾಜ್ಯ ಕಾರ್ಯಾಧ್ಯಕ್ಷರಾದ ಡಾ. ಹಿ. ಶಿ. ಬೋರಲಿಂಗಯ್ಯ, ಪ್ರೊ. ಎನ್. ರಾಜೇಶ್ವರಿ, ಪ್ರಿನ್ಸಿಪಾಲರು, ಸಹ್ಯಾದ್ರಿ ವಿಜ್ಞಾನ ಕಾಲೇಜು, ಡಾ. ಸಬಿತಾ ಬನ್ನಾಡಿ, ಅಧ್ಯಕ್ಷರು, ಕನ್ನಡ ಅಧ್ಯಾಪಕರ ವೇದಿಕೆ ಅವರು ಭಾಗವಹಿಸಲಿದ್ದಾರೆ.
ಮೊದಲ ಗೋಷ್ಠಿಯಲ್ಲಿ ಮಂಗಳೂರಿನ ಡಾ. ವಿಶ್ವನಾಥ ಬದಿಕಾನೆ ಅವರು ಜಾನಪದ ಸ್ವರೂಪ ಮತ್ತು ಮಹತ್ವ ವಿಚಾರವಾಗಿ, ಬಳ್ಳಾರಿಯ ಡಾ. ಅರುಣ್ ಜೋಳದ ಕೂಡ್ಲಿಗಿ ಅವರು ಜಾನಪದ ಅಧ್ಯಯನದ ಸಾಧ್ಯತೆ ವಿಚಾರವಾಗಿ ಮಾತನಾಡಲಿದ್ದಾರೆ. ಡಾ. ಜಿ.ಆರ್. ಲವ ಸಮನ್ವಯ ಕಾರರಾಗಿರುತ್ತಾರೆ.
ಗೋಷ್ಠಿ 2 ರಲ್ಲಿ ಡಾ. ಎಸ್. ಎಂ. ಮುತ್ತಯ್ಯ ಅವರು ಜಾನಪದ ಅನ್ವಯಿಕತೆಯ ಸಾಧ್ಯತೆಗಳು, ಡಾ. ಮೊಗಳ್ಳಿ ಗಣೇಶ್ ಅವರು ಜಾನಪದ ಅಧ್ಯಯನದ ಇತ್ತೀಚಿನ ಬೆಳವಣಿಗೆಗಳು ವಿಚಾರವಾಗಿ ಮಾತನಾಡಲಿದ್ದಾರೆ. ಡಾ. ಜಿ. ಕೆ. ಪ್ರೇಮಾ ಸಮನ್ವಯ ಕಾರರಾಗಿ ಕಾರ್ಯನಿರ್ವಹಿಸಲಿದ್ದಾರೆ. ಸಂವಾದ, ಸಮಾರೋಪ, ಪ್ರಮಾಣ ಪತ್ರ ವಿತರಣೆ ನಡೆಯಲಿದೆ.
ಅಧ್ಯಯನ ಶಿಬಿರದಲ್ಲಿ ಅಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು, ಕಜಾಪ ತಾಲ್ಲೂಕು, ಹೋಬಳಿ ಪದಾಧಿಕಾರಿಗಳು, ದ್ವಿತೀಯ ಬಿ. ಎ. ವಿದ್ಯಾರ್ಥಿಗಳು, ಸ್ನಾತಕೋತ್ತರ ಪದವಿ ತರಗತಿಗಳ ಕನ್ನಡ ಐಚ್ಛಿಕ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ. ಆಸಕ್ತರು ಹೆಸರು, ವಿಳಾಸ, ಕಾಲೇಜು ಹೆಸರು, ದೂರವಾಣಿ ಸಂಖ್ಯೆ ಜೊತೆಯಲ್ಲಿ ನೋಂದಾಯಿಸಿಕೊಳ್ಳಲು ಕಜಾಪ ಜಿಲ್ಲಾ ಅಧ್ಯಕ್ಷರು ಮನವಿ ಮಾಡಿದ್ದಾರೆ. ದೂರವಾಣಿ ಸಂಖ್ಯೆ 9449552795, ಡಾ. ಎಸ್. ಎಂ. ಮುತ್ತಯ್ಯ, ಡಾ. ಮೋಹನ್ ಚಂದ್ರಗುತ್ತಿ, ಡಾ. ಜಿ. ಆರ್. ಲವ, ಡಾ. ಜಿ. ಕೆ. ಪ್ರೇಮಾ, ಅವರಲ್ಲಿ ಹೆಸರು ನೋಂದಾಯಿಸಲು ಡಿ. ಮಂಜುನಾಥ ಪ್ರಕಟಣೆಯಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!