ಜನ ಮನದ ನಾಡಿ ಮಿಡಿತ

Advertisement

IPL 2024: ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಆರ್ಸಿಬಿ..!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 27 ರನ್ ಗಳ ಅಂತರದಿಂದ ಆರ್ಸಿಬಿ ತಂಡವು ಗೆಲುವು ಸಾಧಿಸುವ ಮೂಲಕ ಈಗ ಪ್ಲೇ ಆಫ್ ಗೆ ಪ್ರವೇಶಿಸಿದೆ.

ಮಾಡು ಇಲ್ಲವೆ ಮಡಿ ಎನ್ನುವಂತಿದ್ದ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಚೆನ್ನೈ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಒಂದು ಹಂತದಲ್ಲಿ ಪಂದ್ಯಕ್ಕೆ ಮಳೆರಾಯನ ಭೀತಿ ಎದುರಾಗಿತ್ತು. ಇದೆ ವೇಳೆ ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ಸಿಬಿ ತಂಡವು ವಿರಾಟ್ ಕೊಹ್ಲಿ 47, ದುಫ್ಲೆಸಿಸ್ 54, ರಜತ್ ಪತಿದಾರ್ 41, ಹಾಗೂ ಕ್ಯಾಮರೂನ್ ಗ್ರೀನ್ ಅವರ ಅಜೇಯ 38 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು.

ಇನ್ನೊಂದೆಡೆಗೆ 219 ರನ್ ಗಳ ಗೆಲುವಿನ ಗುರಿಯನ್ನು ಬೆನ್ನಟ್ಟಿದ ಚೆನೈ ಸೂಪರ್ ಕಿಂಗ್ಸ್ ತಂಡವು ಆರಂಭದಲ್ಲಿಯೇ ತಂಡದ ಮೊತ್ತ 19 ರನ್ ಗಳಾಗುವಷ್ಟರಲ್ಲಿ ಎರಡು ವಿಕೆಟ್ ಗಳನ್ನು ಕಳೆದುಕೊಂಡು ಆಘಾತವನ್ನು ಅನುಭವಿಸಿತು. ಈ ಸಂದರ್ಭದಲ್ಲಿ ನೆಲೆಯೂರಿದ ರವೀಂದ್ರ ರಚೀನ್ ಕೇವಲ 37 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಮೂರು ಸಿಕ್ಸರ್ ಗಳ ನೆರವಿನಿಂದಾಗಿ 61 ರನ್ ಗಳಿಸಿದರೆ ಇನ್ನೊಂದೆಡೆಗೆ ರವೀಂದ್ರ ಜಡೇಜಾ ಕೇವಲ 22 ಎಸೆತಗಳಲ್ಲಿ ಮೂರು ಸಿಕ್ಸರ್ ಹಾಗೂ ಮೂರು ಬೌಂಡರಿಗಳ ನೆರವಿನಿಂದ 44 ರನ್ ಗಳಿಸಿದರು. ಆದಾಗ್ಯೂ ಆರ್ಸಿಬಿ ತಂಡದ ಕರಾರುವಕ್ಕಾದ ಬೌಲಿಂಗ್ ದಾಳಿಗೆ ಅಂತಿಮವಾಗಿ ಚೆನ್ನೈ ತಂಡವು 27 ರನ್ ಗಳ ಅಂತರಿಂದ ಸೋಲನ್ನು ಅನುಭವಿಸಬೇಕಾಗಿಯಿತು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!