ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 27 ರನ್ ಗಳ ಅಂತರದಿಂದ ಆರ್ಸಿಬಿ ತಂಡವು ಗೆಲುವು ಸಾಧಿಸುವ ಮೂಲಕ ಈಗ ಪ್ಲೇ ಆಫ್ ಗೆ ಪ್ರವೇಶಿಸಿದೆ.
ಮಾಡು ಇಲ್ಲವೆ ಮಡಿ ಎನ್ನುವಂತಿದ್ದ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಚೆನ್ನೈ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಒಂದು ಹಂತದಲ್ಲಿ ಪಂದ್ಯಕ್ಕೆ ಮಳೆರಾಯನ ಭೀತಿ ಎದುರಾಗಿತ್ತು. ಇದೆ ವೇಳೆ ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ಸಿಬಿ ತಂಡವು ವಿರಾಟ್ ಕೊಹ್ಲಿ 47, ದುಫ್ಲೆಸಿಸ್ 54, ರಜತ್ ಪತಿದಾರ್ 41, ಹಾಗೂ ಕ್ಯಾಮರೂನ್ ಗ್ರೀನ್ ಅವರ ಅಜೇಯ 38 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು.
ಇನ್ನೊಂದೆಡೆಗೆ 219 ರನ್ ಗಳ ಗೆಲುವಿನ ಗುರಿಯನ್ನು ಬೆನ್ನಟ್ಟಿದ ಚೆನೈ ಸೂಪರ್ ಕಿಂಗ್ಸ್ ತಂಡವು ಆರಂಭದಲ್ಲಿಯೇ ತಂಡದ ಮೊತ್ತ 19 ರನ್ ಗಳಾಗುವಷ್ಟರಲ್ಲಿ ಎರಡು ವಿಕೆಟ್ ಗಳನ್ನು ಕಳೆದುಕೊಂಡು ಆಘಾತವನ್ನು ಅನುಭವಿಸಿತು. ಈ ಸಂದರ್ಭದಲ್ಲಿ ನೆಲೆಯೂರಿದ ರವೀಂದ್ರ ರಚೀನ್ ಕೇವಲ 37 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಮೂರು ಸಿಕ್ಸರ್ ಗಳ ನೆರವಿನಿಂದಾಗಿ 61 ರನ್ ಗಳಿಸಿದರೆ ಇನ್ನೊಂದೆಡೆಗೆ ರವೀಂದ್ರ ಜಡೇಜಾ ಕೇವಲ 22 ಎಸೆತಗಳಲ್ಲಿ ಮೂರು ಸಿಕ್ಸರ್ ಹಾಗೂ ಮೂರು ಬೌಂಡರಿಗಳ ನೆರವಿನಿಂದ 44 ರನ್ ಗಳಿಸಿದರು. ಆದಾಗ್ಯೂ ಆರ್ಸಿಬಿ ತಂಡದ ಕರಾರುವಕ್ಕಾದ ಬೌಲಿಂಗ್ ದಾಳಿಗೆ ಅಂತಿಮವಾಗಿ ಚೆನ್ನೈ ತಂಡವು 27 ರನ್ ಗಳ ಅಂತರಿಂದ ಸೋಲನ್ನು ಅನುಭವಿಸಬೇಕಾಗಿಯಿತು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…