ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 27 ರನ್ ಗಳ ಅಂತರದಿಂದ ಆರ್ಸಿಬಿ ತಂಡವು ಗೆಲುವು ಸಾಧಿಸುವ ಮೂಲಕ ಈಗ ಪ್ಲೇ ಆಫ್ ಗೆ ಪ್ರವೇಶಿಸಿದೆ.
ಮಾಡು ಇಲ್ಲವೆ ಮಡಿ ಎನ್ನುವಂತಿದ್ದ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಚೆನ್ನೈ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಒಂದು ಹಂತದಲ್ಲಿ ಪಂದ್ಯಕ್ಕೆ ಮಳೆರಾಯನ ಭೀತಿ ಎದುರಾಗಿತ್ತು. ಇದೆ ವೇಳೆ ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ಸಿಬಿ ತಂಡವು ವಿರಾಟ್ ಕೊಹ್ಲಿ 47, ದುಫ್ಲೆಸಿಸ್ 54, ರಜತ್ ಪತಿದಾರ್ 41, ಹಾಗೂ ಕ್ಯಾಮರೂನ್ ಗ್ರೀನ್ ಅವರ ಅಜೇಯ 38 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು.
ಇನ್ನೊಂದೆಡೆಗೆ 219 ರನ್ ಗಳ ಗೆಲುವಿನ ಗುರಿಯನ್ನು ಬೆನ್ನಟ್ಟಿದ ಚೆನೈ ಸೂಪರ್ ಕಿಂಗ್ಸ್ ತಂಡವು ಆರಂಭದಲ್ಲಿಯೇ ತಂಡದ ಮೊತ್ತ 19 ರನ್ ಗಳಾಗುವಷ್ಟರಲ್ಲಿ ಎರಡು ವಿಕೆಟ್ ಗಳನ್ನು ಕಳೆದುಕೊಂಡು ಆಘಾತವನ್ನು ಅನುಭವಿಸಿತು. ಈ ಸಂದರ್ಭದಲ್ಲಿ ನೆಲೆಯೂರಿದ ರವೀಂದ್ರ ರಚೀನ್ ಕೇವಲ 37 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಮೂರು ಸಿಕ್ಸರ್ ಗಳ ನೆರವಿನಿಂದಾಗಿ 61 ರನ್ ಗಳಿಸಿದರೆ ಇನ್ನೊಂದೆಡೆಗೆ ರವೀಂದ್ರ ಜಡೇಜಾ ಕೇವಲ 22 ಎಸೆತಗಳಲ್ಲಿ ಮೂರು ಸಿಕ್ಸರ್ ಹಾಗೂ ಮೂರು ಬೌಂಡರಿಗಳ ನೆರವಿನಿಂದ 44 ರನ್ ಗಳಿಸಿದರು. ಆದಾಗ್ಯೂ ಆರ್ಸಿಬಿ ತಂಡದ ಕರಾರುವಕ್ಕಾದ ಬೌಲಿಂಗ್ ದಾಳಿಗೆ ಅಂತಿಮವಾಗಿ ಚೆನ್ನೈ ತಂಡವು 27 ರನ್ ಗಳ ಅಂತರಿಂದ ಸೋಲನ್ನು ಅನುಭವಿಸಬೇಕಾಗಿಯಿತು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…