ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರ ಭರ್ಜರಿ ಕಾರ್ಯಾಚರಣೆ: ಲಕ್ಷಾಂತರ ರೂ ಖೋಟಾ ನೋಟು ವಶಕ್ಕೆ,ಆರೋಪಿಗಳು ಅಂದರ್…

ಬಂಟ್ವಾಳ: ಕೇರಳ ರಾಜ್ಯದಿಂದ ಕರ್ನಾಟಕ್ಕೆ ಬಂದು ಖೋಟಾ ನೋಟಗಳನ್ನು ಅಸಲಿ ನೋಟುಗಳಾಗಿ ಪರಿವರ್ತಿಸುವ ಸಮಯದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ಜೈಲು ಪಾಲಾಗಿದ್ದ ಆರೋಪಿಗಳಿಂದ ಇದೀಗ ಮತ್ತೆ ಲಕ್ಷಾಂತರ ರೂ ಹಣವನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದ್ದು, ಖೋಟಾ ನೋಟು ಜಾಲದ ಪತ್ತೆಗಾಗಿ ಪೋಲೀಸ್ ತಂಡ ಕೇರಳ ರಾಜ್ಯಕ್ಕೆ ತೆರಳಿದೆ.
ಕೇರಳ ರಾಜ್ಯದ ಕಾಸರಗೋಡು ತಾಲೂಕು ಕೂಡ್ಲು ಗ್ರಾಮದ ಚೂರಿ ಎಂಬಲ್ಲಿನ ಮೊಹಮ್ಮದ್ ಸಿ.ಎ ಹಾಗೂ ಕಮರುನ್ನೀಸಾ ಎಂಬವರನ್ನು ಕಳೆದ ಮೂರು ನಾಲ್ಕುದಿನಗಳ ಹಿಂದೆ ಪೋಲೀಸರು ಬಂಧಿಸಿದ್ದರು.
ಆರೋಪಿಗಳು ವಿನಿಮಯಕ್ಕಾಗಿ ಸ್ವಾಧೀನದಲ್ಲಿಟ್ಟುಕೊಂಡಿದ್ದ 23 ಸಾವಿರ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದರು. ಬಂಟ್ವಾಳ ನಗರ ಠಾಣಾ ಪೊಲೀಸರು ಮೇ.10 ರಂದು ಕೇರಳ ರಾಜ್ಯದ ಕಾಸರಗೋಡು ತಾಲೂಕು ಕೂಡ್ಲು ಗ್ರಾಮದ ಚೂರಿ ಎಂಬಲ್ಲಿನ ಮೊಹಮ್ಮದ್ ಸಿ.ಎ ಹಾಗೂ ಕಮರುನ್ನೀಸಾ ಎಂಬವರು KL 14-T-777 ನೇ ಕಾರಿನಲ್ಲಿ ಸ್ವಾಧೀನದಲ್ಲಿಟ್ಟುಕೊಂಡಿದ್ದ 500/- ರೂಪಾಯಿ ಮುಖಬೆಲೆ 46 ನೋಟುಗಳು ಸೇರಿ ಒಟ್ಟು 23 ಸಾವಿರ ಹಣವನ್ನು ಸ್ವಾಧೀನಪಡಿಸಿಕೊಂಡು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿದ್ಸರು.


ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಆದರೆ ಆರೋಪಿಗಳ ಹೆಚ್ಚಿನ ತನಿಖೆ ನಡೆಸುವ ಉದ್ದೇಶದಿಂದ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ತನಿಖೆ ನಡೆಸಿದಾಗ, ಆರೋಪಿಗಳು ಅಸಲಿ ನೋಟುಗಳನ್ನಾಗಿ ಮಾಡಲು ಕೇರಳದಲ್ಲಿ ಸ್ವಾಧೀನದಲ್ಲಿಟ್ಟುಕೊಂಡಿದ್ದ ಒಟ್ಟು 2,30,000/- ರೂಪಾಯಿ ಮೌಲ್ಯದ 500/- ರೂಪಾಯಿಯ 460 ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಬಂಧಿಸಿದ ದಿನ ವಶ ಪಡಿಸಿಕೊಂಡ 23 ಸಾವಿರ ರೂ ಹೀಗೆ ಒಟ್ಟು 2,53,000/- ರೂಪಾಯಿ ಮೌಲ್ಯದ 500/- ರೂಪಾಯಿ ಮುಖಬೆಲೆಯ 506 ಖೋಟಾ ನೋಟುಗಳನ್ನು ಹಾಗೂ 6 ಲಕ್ಷ ಮೌಲ್ಯದ ಕಾರನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.


ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಾಂತ್, ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್ ಮತ್ತು ರಾಜೇಂದ್ರ ಕೆ.ವಿ., ಬಂಟ್ವಾಳ ಉಪಾಧೀಕ್ಷಕ ವಿಜಯ ಪ್ರಸಾದ್ ರವರುಗಳ ಮಾರ್ಗದರ್ಶನದಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ರವರ ನೇತೃತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕ ಆಂಜನೇಯ ರೆಡ್ಡಿ ಹಾಗೂ ರಾಮಕೃಷ್ಣ, ಸಿಬ್ಬಂದಿಗಳಾದ ರಾಜೇಶ್ ಎಸ್, ಇರ್ಷಾದ್ ಪಿ , ಮನೋಹರ, ಗಣೇಶ್, ಮೋಹನ್, ಬಸವರಾಜ್ ಕಮ್ಮಾರ್, ರಂಗನಾಥ್, ಕುಮಾರಿ ಅರ್ಪಿತಾ ರವರು ಕಾರ್ಯಚರಣೆಯಲ್ಲಿ ಸಹಕರಿಸಿದ್ದಾರೆ.
ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರವರು, ಪತ್ತೆ ತಂಡವನ್ನು ಪ್ರಶಂಸಿ ನಗದು ಬಹುಮಾನವನ್ನು ಘೋಷಿಸಿರುತ್ತಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!