ತ್ರಿಪುರ: ವಿಧಾನಸಭೆ ಕಲಾಪದಲ್ಲಿ ಇಂದು ಆಡಳಿತಾರೂಢ ಬಿಜೆಪಿ ಮತ್ತು ತಿಪ್ರಾ ಮೋಥಾ ಪಕ್ಷ ಸೇರಿ ಪ್ರತಿಪಕ್ಷದ ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ. ಸದನದ ಬಾವಿಗೆ ಇಳಿದು ಗಲಭೆ ಉಂಟು ಮಾಡಿ ಶಾಸಕರು ಯುದ್ಧವನ್ನೇ ಸೃಷ್ಟಿಸಿದ್ದಾರೆ. ಇದರಿಂದ ಅಸಮಾಧಾನಗೊಂಡ ಸ್ಪೀಕರ್ ಶಾಸಕರನ್ನು ಒಂದು ದಿನದ ಮಟ್ಟಿಗೆ ಕಲಾಪದಿಂದ ಅಮಾನತುಗೊಳಿಸಿದ್ದಾರೆ. ಇಂದು ಬೆಳಗ್ಗೆ ಕಲಾಪದಲ್ಲಿ ಪ್ರತಿಪಕ್ಷದ ನಾಯಕ ಅನಿಮೇಶ್ ದೆಬ್ಬರ್ಮಾ ಅವರು ಬಾಗ್ಬಾಶಾ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಜದಾವ್ಲಾಲ್ ನಾಥ್ ಇತ್ತೀಚಿಗೆ ಸದನದಲ್ಲೇ ಅಶ್ಲೀಲ ಚಿತ್ರ ವೀಕ್ಷಣೆ ವಿಷಯದ ಬಗ್ಗೆ ಪ್ರಶ್ನೆಯನ್ನು ಎತ್ತಿದರು. ಆದರೆ, ಈ ಬಗ್ಗೆ ಚರ್ಚೆಗೆ ಅವಕಾಶ ಕಲ್ಪಿಸಿದ ಸ್ಪೀಕರ್, ಪ್ರಮುಖ ವಿಷಯಗಳ ಚರ್ಚೆ ನಂತರ ತಮ್ಮ ಬಳಿಗೆ ಹಿಂತಿರುಗಿ ಎಂದು ಸೂಚಿಸಿದರು. ಇದರಿಂದ ಪ್ರತಿಪಕ್ಷಗಳ ಶಾಸಕರು ಘೋಷಣೆಗಳನ್ನು ಕೂಗಲು ಆರಂಭಿಸಿದರು.
ಸ್ಪೀಕರ್ ಕುರ್ಚಿಯತ್ತ ಶಾಸಕರು ನುಗ್ಗಲು ಯತ್ನಿಸಿದರು. ಈ ವೇಳೆ, ವಿಧಾನಸಭೆಯ ಸಿಬ್ಬಂದಿ ಸ್ಪೀಕರ್ ಪೀಠದ ಬಳಿ ಭದ್ರತೆಯನ್ನು ಕಲ್ಪಿಸಿದರು. ಮಹಿಳಾ ಶಾಸಕರು ಸೇರಿ ಮೇಜುಗಳ ಮೇಲೆ ಹತ್ತಿ ಬೊಬ್ಬೆ ಹೊಡೆಯುತ್ತಾ ಸಂಧಿಗ್ಧ ವಾತಾವರಣ ಸೃಷ್ಟಿ ಮಾಡಿದರು. ಹೀಗಾಗಿ ಇಡೀ ಕಲಾಪವು ಗೊಂದಲದ ವಾತಾವರಣವಾಗಿ ಬದಲಾಯಿತು.
ಸದನದ ಶಾಸಕರ ವರ್ತನೆಯನ್ನು ಸ್ಪೀಕರ್ ಬಿಸ್ವಬಂಧ್ ಸೇನ್ ಖಂಡಿಸಿದರು. ಅಲ್ಲದೇ, ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ತಿಪ್ರಾ ಮೋಥಾ ಪಕ್ಷದ ಮೂವರು ಹಾಗೂ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಪಕ್ಷದ ತಲಾ ಇಬ್ಬರು ಸೇರಿ ಐವರು ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿದರು. ತಿಪ್ರಾ ಮೋಥಾ ಪಕ್ಷದ ಬ್ರಿಸ್ವಕೇತು ದೆಬ್ಬರ್ಮಾ, ನಂದಿತಾ ರಿಯಾಂಗ್ ಮತ್ತು ರಂಜಿತ್ ದೆಬ್ಬರ್ಮಾ ಹಾಗೂ ಸಿಪಿಐ(ಎಂ) ಶಾಸಕ ನಯನ್ ಸರ್ಕಾರ್, ಕಾಂಗ್ರೆಸ್ನ ಸುದೀಪ್ ರಾಯ್ ಬರ್ಮನ್ ಅವರನ್ನು ಸ್ಪೀಕರ್ ಒಂದು ದಿನದ ಮಟ್ಟಿಗೆ ಅಮಾನತು ಮಾಡಿದರು. ಆದರೆ, ಸ್ಪೀಕರ್ ಅವರ ನಿರ್ಧಾರ ವಿರೋಧಿಸಿದ ಪ್ರತಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿ ಹೊರಟರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…