ಉಡುಪಿ: ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ.
ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು ಸ್ವಾಮಿ ದೈವದ ನೇಮೋತ್ಸವ ಏರ್ಪಡಿಸಲಾಗಿತ್ತು. ಇದ್ದಕ್ಕಿದ್ದಂತೆ ನಡುರಾತ್ರಿ ವ್ಯಾಪಕ ಮಳೆ ಆರಂಭವಾಯಿತು. ಸುರಿಯುವ ಮಳೆಯಲ್ಲೇ ದೈವ ನರ್ತಕ ರವಿ ಪಡ್ಡಮ್ ಅವರು ಗಗ್ಗರಸೇವೆ ನಡೆಸಿಕೊಟ್ಟರು. ಮಳೆಯಲ್ಲೇ ನಡೆಯುತ್ತಿರುವ ನೇಮೋತ್ಸವದ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದೆ.
ದೈವರಾಧನೆಯ ಬಗ್ಗೆ ಕರಾವಳಿ ಜನರಲ್ಲಿ ಇರುವ ಶ್ರದ್ದೆ ಈ ಮೂಲಕ ವ್ಯಕ್ತವಾಗಿದೆ. ಆರಾಧನೆಯಲ್ಲಿ ಯಾವುದೇ ಲೋಪ ಬಾರದಂತೆ ದೈವರಾಧಕರು ಮತ್ತು ಜನರು ಈ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಅಂದ ಹಾಗೆ ತುಳುನಾಡಿನಲ್ಲಿ ಈ ವರ್ಷದಲ್ಲಿ ನಡೆಯುವ ಬಬ್ಬು ಸ್ವಾಮಿ ದೈವದ ಕೊನೆಯ ಕೋಲ ಇದು ಎಂದು ತಿಳಿದುಬಂದಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…