ಉಡುಪಿ: ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ.
ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು ಸ್ವಾಮಿ ದೈವದ ನೇಮೋತ್ಸವ ಏರ್ಪಡಿಸಲಾಗಿತ್ತು. ಇದ್ದಕ್ಕಿದ್ದಂತೆ ನಡುರಾತ್ರಿ ವ್ಯಾಪಕ ಮಳೆ ಆರಂಭವಾಯಿತು. ಸುರಿಯುವ ಮಳೆಯಲ್ಲೇ ದೈವ ನರ್ತಕ ರವಿ ಪಡ್ಡಮ್ ಅವರು ಗಗ್ಗರಸೇವೆ ನಡೆಸಿಕೊಟ್ಟರು. ಮಳೆಯಲ್ಲೇ ನಡೆಯುತ್ತಿರುವ ನೇಮೋತ್ಸವದ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದೆ.
ದೈವರಾಧನೆಯ ಬಗ್ಗೆ ಕರಾವಳಿ ಜನರಲ್ಲಿ ಇರುವ ಶ್ರದ್ದೆ ಈ ಮೂಲಕ ವ್ಯಕ್ತವಾಗಿದೆ. ಆರಾಧನೆಯಲ್ಲಿ ಯಾವುದೇ ಲೋಪ ಬಾರದಂತೆ ದೈವರಾಧಕರು ಮತ್ತು ಜನರು ಈ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಅಂದ ಹಾಗೆ ತುಳುನಾಡಿನಲ್ಲಿ ಈ ವರ್ಷದಲ್ಲಿ ನಡೆಯುವ ಬಬ್ಬು ಸ್ವಾಮಿ ದೈವದ ಕೊನೆಯ ಕೋಲ ಇದು ಎಂದು ತಿಳಿದುಬಂದಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…