ಉಡುಪಿ: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಬಂಡಾಯವಾಗಿ ಸ್ಪರ್ಧಿಸಿರುವವರಿಂದ ಯಾವುದೇ ರೀತಿಯ ಹೊಡೆತ ಬೀಳಲ್ಲ. ನೈರುತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಡಾ.ಕೆ.ಕೆ.ಮಂಜುನಾಥ್ ಕುಮಾರ್ ಸೇರಿದಂತೆ ಎಲ್ಲ ಆರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಮತ್ತು ನಮ್ಮ ಆರು ಅಭ್ಯರ್ಥಿಗಳು ಗೆಲ್ಲಬೇಕು ಎಂದು ಮುಖ್ಯ ಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಅದರಂತೆ ನಮ್ಮ ಎಲ್ಲ ವರಿಷ್ಠರು, ನಾಯಕರು ಚುನಾವಣೆಯಲ್ಲಿ ತೊಡಗಿಸಿ ಕೊಂಡಿದ್ದಾರೆ ಎಂದರು.
ಬಂಡಾಯ ಎಂಬುದು ಎಲ್ಲ ಪಕ್ಷದಲ್ಲೂ ಇರುತ್ತದೆ. ಬಿಜೆಪಿಯಲ್ಲೂ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಇಂದು ವಿಶ್ವಾದ ಮೇಲೆಯೇ ಅಧಿಕಾರಕ್ಕೆ ಬಂದಿದೆ. ಎಲ್ಲ ಐದು ಗ್ಯಾರಂಟಿ ಗಳನ್ನು ಅನುಷ್ಠಾನ ಮಾಡಲಾಗಿದೆ. ಈ ಯೋಜನೆ ಲೋಕಸಭಾ ಹಾಗೂ ಈ ವಿಧಾನ ಪರಿಷತ್ ಚುನಾವಣೆಗೂ ಸಹಾಯ ಆಗುತ್ತದೆ ಎಂಬ ವಿಶ್ವಾಸ ಇದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶಿಕ್ಷಕರ ಕ್ಷೇತ್ರದಿಂದ ಡಾ.ಕೆ.ಕೆ.ಮಂಜುನಾಥ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮುಖಂಡರಾದ ಮಮತಾ ಗಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಐವನ್ ಡಿಸೋಜ, ಹರೀಶ್ ಕಿಣಿ, ರಮೇಶ್ ಕಾಂಚನ್ ಉಪಸ್ಥಿತರಿದ್ದರು
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…