ಇತರೆ

ಭವ್ಯ ಸ್ವಾಗತದೊಂದಿಗೆ ಕುಕ್ಕೆಗೆ ಆಗಮಿಸಿದ ನೂತನ ಬಂಡಿರಥ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವೇಮೂ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಸೇವಾರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸುವ ನೂತನ ಬಂಡಿ ರಥವು ಭಕ್ತಿ ಸಡಗರದ ಭವ್ಯ ಮೆರವಣಿಗೆಯೊಂದಿಗೆ ಸೋಮವಾರ ಸಂಜೆ ಕುಕ್ಕೆಗೆ ಆಗಮಿಸಿತು.

ಆನೆ, ಬಿರುದಾವಳಿ ಮತ್ತು ಬ್ಯಾಂಡ್ ವಾದ್ಯಗಳ ನಿನಾದದೊಂದಿಗೆ ರಥವನ್ನು ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಯಿತು.
ಪುಷ್ಪಾರ್ಚನೆ:
ಸೋಮವಾರ ಸಂಜೆ ಕ್ಷೇತ್ರಕ್ಕಾಗಮಿಸಿದ ರಥವನ್ನು ಭಕ್ತಿಪೂರ್ವಕವಾಗಿ ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಸ್ವಾಗತಿಸಲಾಯಿತು.ಆರಂಭದಲ್ಲಿ ಶ್ರೀ ಮಹಾಗಣಪತಿಗೆ ಪೂಜೆ ನೆರವೇರಿಸಿದ ಬಳಿಕ ಪುರೋಹಿತ ಪ್ರಸಾದ್ ಕಲ್ಲೂರಾಯ ನೂತನ ಬಂಡಿ ರಥಕ್ಕೆ ಪೂಜೆ ನೆರವೇರಿಸಿದರು.ಬಳಿಕ ಶ್ರೀ ದೇವಳದ ಆಡಳಿತಾಧಿಕಾರಿ ಮತ್ತು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ನೂತನ ರಥಕ್ಕೆ ಪುಷ್ಪಾರ್ಚನೆ ಮಾಡಿದರು.ಬಳಿಕ ರಥಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ, ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ,ಗ್ರಾ.ಪಂ.ಸದಸ್ಯ ಹರೀಶ್.ಎಸ್.ಇಂಜಾಡಿ, ಸೇವಾರ್ಥಿಗಳ ಆಪ್ತರಾದ ಮೋಹನದಾಸ ರೈ, ರಥ ನೀಡುವಲ್ಲಿ ಸಹಕರಿಸಿದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ ಬೆಂಗಳೂರು, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರುಗಳಾದ ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ, ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯೆ ವಿಮಲಾ ರಂಗಯ್ಯ, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಕೃಷ್ಣಮೂರ್ತಿ ಭಟ್ ನೂತನ ರಥಕ್ಕೆ ಪುಷ್ಪಾರ್ಚನೆ ಮಾಡಿದರು.

ಶ್ರೀ ದೇವರ ಸೇವೆ ಪುಣ್ಯದ ಕಾರ್ಯ: ಎಸಿ ಜುಬಿನ್ ಮೊಹಪಾತ್ರ
ನಂತರ ಭಕ್ತಿ ಪೂರ್ವಕವಾದ ಭವ್ಯ ಮೆರವಣಿಗೆಗೆ ಶ್ರೀ ದೇವಳದ ಆಡಳಿತಾಧಿಕಾರಿ ಜುಬಿನ್ ಮೊಹಪಾತ್ರ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ದೇವರ ಸೇವೆ ಮಾಡುವುದು ಪುಣ್ಯದ ಕಾರ್ಯ.ಪುಣ್ಯ ತಾಣ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂಡಿ ರಥ ನೀಡುವಂತಹ ಸೇವೆಯನ್ನು ನೀಡಿದುದು ಶ್ರೀ ದೇವರ ಕೃಪಾಶೀರ್ವಾದಕ್ಕೆ ಬುನಾದಿಯಾಗುತ್ತದೆ.ಸೇವಾರ್ಥಿಗಳಿಗೆ ಮತ್ತು ಇದಕ್ಕೆ ಸಹಕರಿಸಿದ ಅವರ ಆಪ್ತರಿಗೂ ಕೃತಜ್ಞತೆಗಳು. ಇದೇ ರೀತಿ ಹೆಚ್ಚಿನ ಇನ್ನೂ ಹೆಚ್ಚಿನ ದಾನಿಗಳು ಶ್ರೀ ದೇವಳಕ್ಕೆ ಸೇವೆ ನೆರವೇರಿಸಲು ಮುಂದೆ ಬಂದರೆ ಸಂತಸಕರ.ಅಲ್ಲದೆ ಸುಬ್ರಹ್ಮಣ್ಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿದೆ.ಇಲ್ಲಿ ಪ್ರಗತಿ ಕಾರ್ಯಗಳ ಅನುಷ್ಠಾನಕ್ಕೆ ಕೂಡಾ ದಾನಿಗಳು ಸಹಕರಿಸಿ ಕೊಡುಗೆ ನೀಡಲು ಮುಂದೆ ಬಂದರೆ ಹೆಚ್ಚು ಅನುಕೂಲಕರ ಎಂದರು.
ಶೀಘ್ರ ರಚನೆ ಶ್ಲಾಘನೀಯ:ಡಾ.ನಿಂಗಯ್ಯ
ಕ್ಷೇತ್ರದ ಬ್ರಹ್ಮರಥ ಸೇರಿದಂತೆ ಅನೇಕ ರಥಗಳನ್ನು ನಿರ್ಮಿಸಿದ ರಥಶಿಲ್ಪಿ ಕೋಟೇಶ್ವರದ ರಾಜಗೋಪಾಲ ಆಚಾರ್ಯ ರಥವನ್ನು ಶೀಘ್ರವಾಗಿ ನಿರ್ಮಿಸಿಕೊಟ್ಟಿದ್ದಾರೆ.ಕೇವಲ ಎರಡು ತಿಂಗಳಲ್ಲಿ ರಥ ನಿರ್ಮಿಸಿಕೊಟ್ಟ ಇವರ ಶ್ರಮವು ಅಭಿನಂದನೀಯ ಎಂದು ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಹೇಳಿದರು.
ಭವ್ಯ ಮೆರವಣಿಗೆ:
ಬಳಿಕ ಕಾಶಿಕಟ್ಟೆಯಿಂದ ಭಕ್ತಿಪೂರ್ವಕವಾದ ಭವ್ಯ ಮೆರವಣಿಗೆ ಆರಂಭವಾಯಿತು.ಆನೆ ಬಿರುದಾವಳಿಗಳು, ಬ್ಯಾಂಡ್ ವಾದ್ಯಗಳ ನಿನಾದದೊಂದಿಗೆ ಮೆರವಣಿಗೆಯಲ್ಲಿ ನೂತನ ರಥವನ್ನು ಶ್ರೀ ದೇವಳಕ್ಕೆ ಕೊಂಡೊಯ್ಯಲಾಯಿತು.ಶ್ರೀ ದೇವಳದ ಗೋಪುರದ ಬಳಿ ಕ್ಷೇತ್ರ ಪುರೋಹಿತ ವೇದಮೂರ್ತಿ ಮಧುಸೂದನ ಕಲ್ಲೂರಾಯರು ರಥಕ್ಕೆ ಪೂಜೆ ನೆರವೇರಿಸಿದರು.ಅಲ್ಲದೆ ತೆಂಗಿನ ಕಾಯಿ ಸಮರ್ಪಿಸಿದರು. ಮೆರವಣಿಗೆಯಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರುಗಳು, ಮಾಸ್ಟರ್ ಪ್ಲಾನ್ ಸಮಿತಿಯ ಮಾಜಿ ಸದಸ್ಯರುಗಳು, ಶ್ರೀ ದೇವಳದ ಸಿಬಂಧಿಗಳು, ಜನಪ್ರತಿನಿಧಿಗಳು, ಭಕ್ತಾಧಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

2 days ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

2 days ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

3 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

4 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

4 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

5 days ago