ಜನ ಮನದ ನಾಡಿ ಮಿಡಿತ

Advertisement

ತ್ಯಾಜ್ಯ ಎಸೆದವನ ಗುರುತು ಸಿಸಿಟಿವಿಯಲ್ಲಿ ಸೆರೆ

ಮಂಜನಾಡಿ:ರಸ್ತೆ ಬದಿಯ ತ್ಯಾಜ್ಯ ಸಮಸ್ಯೆಯಿಂದ ಬೇಸತ್ತ ಗ್ರಾ.ಪಂ ಆಡಳಿತ ಸಿ.ಸಿ ಟಿವಿ ಅಳವಡಿಸಿದ ದಿನದಂದೇ ಕೇರಳ ನೋಂದಾಯಿಸಲ್ಪಟ್ಟ ಕಾರಿನಲ್ಲಿ ತ್ಯಾಜ್ಯವನ್ನು ತಂದು ರಸ್ತೆಬದಿಯಲ್ಲೇ ಎಸೆದು ಹೋಗಿರುವ ಘಟನೆ ಮಂಜನಾಡಿ ಗ್ರಾಮದ ಬಟ್ಯಡ್ಕ ನಿವೇಶನದ ಬಳಿ ಸೆರೆಯಾಗಿದೆ. ಕರ್ನಾಟಕ- ಕೇರಳ ಸಂಪರ್ಕಿಸುವ ರಸ್ತೆ ಇದಾಗಿರುವುದರಿಂದ ಕೇರಳ ಭಾಗದಿಂದ ತ್ಯಾಜ್ಯ ತಂದು ಇಲ್ಲಿ ಎಸೆಯಲಾಗುತ್ತಿದೆಯೇ ಅನ್ನುವ ಅನುಮಾನ ವ್ಯಕ್ತವಾಗಿದೆ.

ಕೇರಳ ನೋಂದಾಯಿತ Kl 14AB3823 ಟಾಟಾ‌ ಆಲ್ಟ್ರೋಝ್ ಕಾರಿನಲ್ಲಿ ತ್ಯಾಜ್ಯ ತಂದ ಆರೋಪಿ ಬಟ್ಯಡ್ಕ ನಿವೇಶನಗಳಿರುವ ಸಮೀಪ ಕಾರು ನಿಲ್ಲಿಸಿ ತ್ಯಾಜ್ಯ ಎಸೆದು ಪರಾರಿಯಾಗಿದ್ದಾನೆ. ಈ ಭಾಗದಲ್ಲಿ ರಸ್ತೆಬದಿಯಲ್ಲಿ ತ್ಯಾಜ್ಯ ಎಸೆಯುವ ಪರಿಣಾಮ ಮಾಲಿನ್ಯ ಉಂಟಾಗಿ ಸ್ಥಳೀಯರು ಗ್ರಾ.ಪಂ.ಗೆ ವ್ಯಾಪಕವಾಗಿ ದೂರುಗಳನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೇ.19 ರಂದು ಸಿಸಿಟಿವಿಯನ್ನು ಗ್ರಾ.ಪಂ ಅಳವಡಿಸಿತ್ತು. ಅಂದೇ ತ್ಯಾಜ್ಯ ಎಸೆಯುವವರ ಕೃತ್ಯ ಬಯಲಾಗಿದೆ. ಈ ಕುರಿತು ಮಂಜನಾಡಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!