ಜನ ಮನದ ನಾಡಿ ಮಿಡಿತ

Advertisement

ತ್ಯಾಜ್ಯ ಎಸೆದವನ ಗುರುತು ಸಿಸಿಟಿವಿಯಲ್ಲಿ ಸೆರೆ

ಮಂಜನಾಡಿ:ರಸ್ತೆ ಬದಿಯ ತ್ಯಾಜ್ಯ ಸಮಸ್ಯೆಯಿಂದ ಬೇಸತ್ತ ಗ್ರಾ.ಪಂ ಆಡಳಿತ ಸಿ.ಸಿ ಟಿವಿ ಅಳವಡಿಸಿದ ದಿನದಂದೇ ಕೇರಳ ನೋಂದಾಯಿಸಲ್ಪಟ್ಟ ಕಾರಿನಲ್ಲಿ ತ್ಯಾಜ್ಯವನ್ನು ತಂದು ರಸ್ತೆಬದಿಯಲ್ಲೇ ಎಸೆದು ಹೋಗಿರುವ ಘಟನೆ ಮಂಜನಾಡಿ ಗ್ರಾಮದ ಬಟ್ಯಡ್ಕ ನಿವೇಶನದ ಬಳಿ ಸೆರೆಯಾಗಿದೆ. ಕರ್ನಾಟಕ- ಕೇರಳ ಸಂಪರ್ಕಿಸುವ ರಸ್ತೆ ಇದಾಗಿರುವುದರಿಂದ ಕೇರಳ ಭಾಗದಿಂದ ತ್ಯಾಜ್ಯ ತಂದು ಇಲ್ಲಿ ಎಸೆಯಲಾಗುತ್ತಿದೆಯೇ ಅನ್ನುವ ಅನುಮಾನ ವ್ಯಕ್ತವಾಗಿದೆ.

ಕೇರಳ ನೋಂದಾಯಿತ Kl 14AB3823 ಟಾಟಾ‌ ಆಲ್ಟ್ರೋಝ್ ಕಾರಿನಲ್ಲಿ ತ್ಯಾಜ್ಯ ತಂದ ಆರೋಪಿ ಬಟ್ಯಡ್ಕ ನಿವೇಶನಗಳಿರುವ ಸಮೀಪ ಕಾರು ನಿಲ್ಲಿಸಿ ತ್ಯಾಜ್ಯ ಎಸೆದು ಪರಾರಿಯಾಗಿದ್ದಾನೆ. ಈ ಭಾಗದಲ್ಲಿ ರಸ್ತೆಬದಿಯಲ್ಲಿ ತ್ಯಾಜ್ಯ ಎಸೆಯುವ ಪರಿಣಾಮ ಮಾಲಿನ್ಯ ಉಂಟಾಗಿ ಸ್ಥಳೀಯರು ಗ್ರಾ.ಪಂ.ಗೆ ವ್ಯಾಪಕವಾಗಿ ದೂರುಗಳನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೇ.19 ರಂದು ಸಿಸಿಟಿವಿಯನ್ನು ಗ್ರಾ.ಪಂ ಅಳವಡಿಸಿತ್ತು. ಅಂದೇ ತ್ಯಾಜ್ಯ ಎಸೆಯುವವರ ಕೃತ್ಯ ಬಯಲಾಗಿದೆ. ಈ ಕುರಿತು ಮಂಜನಾಡಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!