ಜನ ಮನದ ನಾಡಿ ಮಿಡಿತ

Advertisement

ತ್ಯಾಜ್ಯ ಎಸೆದವನ ಗುರುತು ಸಿಸಿಟಿವಿಯಲ್ಲಿ ಸೆರೆ

ಮಂಜನಾಡಿ:ರಸ್ತೆ ಬದಿಯ ತ್ಯಾಜ್ಯ ಸಮಸ್ಯೆಯಿಂದ ಬೇಸತ್ತ ಗ್ರಾ.ಪಂ ಆಡಳಿತ ಸಿ.ಸಿ ಟಿವಿ ಅಳವಡಿಸಿದ ದಿನದಂದೇ ಕೇರಳ ನೋಂದಾಯಿಸಲ್ಪಟ್ಟ ಕಾರಿನಲ್ಲಿ ತ್ಯಾಜ್ಯವನ್ನು ತಂದು ರಸ್ತೆಬದಿಯಲ್ಲೇ ಎಸೆದು ಹೋಗಿರುವ ಘಟನೆ ಮಂಜನಾಡಿ ಗ್ರಾಮದ ಬಟ್ಯಡ್ಕ ನಿವೇಶನದ ಬಳಿ ಸೆರೆಯಾಗಿದೆ. ಕರ್ನಾಟಕ- ಕೇರಳ ಸಂಪರ್ಕಿಸುವ ರಸ್ತೆ ಇದಾಗಿರುವುದರಿಂದ ಕೇರಳ ಭಾಗದಿಂದ ತ್ಯಾಜ್ಯ ತಂದು ಇಲ್ಲಿ ಎಸೆಯಲಾಗುತ್ತಿದೆಯೇ ಅನ್ನುವ ಅನುಮಾನ ವ್ಯಕ್ತವಾಗಿದೆ.

ಕೇರಳ ನೋಂದಾಯಿತ Kl 14AB3823 ಟಾಟಾ‌ ಆಲ್ಟ್ರೋಝ್ ಕಾರಿನಲ್ಲಿ ತ್ಯಾಜ್ಯ ತಂದ ಆರೋಪಿ ಬಟ್ಯಡ್ಕ ನಿವೇಶನಗಳಿರುವ ಸಮೀಪ ಕಾರು ನಿಲ್ಲಿಸಿ ತ್ಯಾಜ್ಯ ಎಸೆದು ಪರಾರಿಯಾಗಿದ್ದಾನೆ. ಈ ಭಾಗದಲ್ಲಿ ರಸ್ತೆಬದಿಯಲ್ಲಿ ತ್ಯಾಜ್ಯ ಎಸೆಯುವ ಪರಿಣಾಮ ಮಾಲಿನ್ಯ ಉಂಟಾಗಿ ಸ್ಥಳೀಯರು ಗ್ರಾ.ಪಂ.ಗೆ ವ್ಯಾಪಕವಾಗಿ ದೂರುಗಳನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೇ.19 ರಂದು ಸಿಸಿಟಿವಿಯನ್ನು ಗ್ರಾ.ಪಂ ಅಳವಡಿಸಿತ್ತು. ಅಂದೇ ತ್ಯಾಜ್ಯ ಎಸೆಯುವವರ ಕೃತ್ಯ ಬಯಲಾಗಿದೆ. ಈ ಕುರಿತು ಮಂಜನಾಡಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!