ಮಂಜನಾಡಿ:ರಸ್ತೆ ಬದಿಯ ತ್ಯಾಜ್ಯ ಸಮಸ್ಯೆಯಿಂದ ಬೇಸತ್ತ ಗ್ರಾ.ಪಂ ಆಡಳಿತ ಸಿ.ಸಿ ಟಿವಿ ಅಳವಡಿಸಿದ ದಿನದಂದೇ ಕೇರಳ ನೋಂದಾಯಿಸಲ್ಪಟ್ಟ ಕಾರಿನಲ್ಲಿ ತ್ಯಾಜ್ಯವನ್ನು ತಂದು ರಸ್ತೆಬದಿಯಲ್ಲೇ ಎಸೆದು ಹೋಗಿರುವ ಘಟನೆ ಮಂಜನಾಡಿ ಗ್ರಾಮದ ಬಟ್ಯಡ್ಕ ನಿವೇಶನದ ಬಳಿ ಸೆರೆಯಾಗಿದೆ. ಕರ್ನಾಟಕ- ಕೇರಳ ಸಂಪರ್ಕಿಸುವ ರಸ್ತೆ ಇದಾಗಿರುವುದರಿಂದ ಕೇರಳ ಭಾಗದಿಂದ ತ್ಯಾಜ್ಯ ತಂದು ಇಲ್ಲಿ ಎಸೆಯಲಾಗುತ್ತಿದೆಯೇ ಅನ್ನುವ ಅನುಮಾನ ವ್ಯಕ್ತವಾಗಿದೆ.
ಕೇರಳ ನೋಂದಾಯಿತ Kl 14AB3823 ಟಾಟಾ ಆಲ್ಟ್ರೋಝ್ ಕಾರಿನಲ್ಲಿ ತ್ಯಾಜ್ಯ ತಂದ ಆರೋಪಿ ಬಟ್ಯಡ್ಕ ನಿವೇಶನಗಳಿರುವ ಸಮೀಪ ಕಾರು ನಿಲ್ಲಿಸಿ ತ್ಯಾಜ್ಯ ಎಸೆದು ಪರಾರಿಯಾಗಿದ್ದಾನೆ. ಈ ಭಾಗದಲ್ಲಿ ರಸ್ತೆಬದಿಯಲ್ಲಿ ತ್ಯಾಜ್ಯ ಎಸೆಯುವ ಪರಿಣಾಮ ಮಾಲಿನ್ಯ ಉಂಟಾಗಿ ಸ್ಥಳೀಯರು ಗ್ರಾ.ಪಂ.ಗೆ ವ್ಯಾಪಕವಾಗಿ ದೂರುಗಳನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೇ.19 ರಂದು ಸಿಸಿಟಿವಿಯನ್ನು ಗ್ರಾ.ಪಂ ಅಳವಡಿಸಿತ್ತು. ಅಂದೇ ತ್ಯಾಜ್ಯ ಎಸೆಯುವವರ ಕೃತ್ಯ ಬಯಲಾಗಿದೆ. ಈ ಕುರಿತು ಮಂಜನಾಡಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…