ಮಂಜನಾಡಿ:ರಸ್ತೆ ಬದಿಯ ತ್ಯಾಜ್ಯ ಸಮಸ್ಯೆಯಿಂದ ಬೇಸತ್ತ ಗ್ರಾ.ಪಂ ಆಡಳಿತ ಸಿ.ಸಿ ಟಿವಿ ಅಳವಡಿಸಿದ ದಿನದಂದೇ ಕೇರಳ ನೋಂದಾಯಿಸಲ್ಪಟ್ಟ ಕಾರಿನಲ್ಲಿ ತ್ಯಾಜ್ಯವನ್ನು ತಂದು ರಸ್ತೆಬದಿಯಲ್ಲೇ ಎಸೆದು ಹೋಗಿರುವ ಘಟನೆ ಮಂಜನಾಡಿ ಗ್ರಾಮದ ಬಟ್ಯಡ್ಕ ನಿವೇಶನದ ಬಳಿ ಸೆರೆಯಾಗಿದೆ. ಕರ್ನಾಟಕ- ಕೇರಳ ಸಂಪರ್ಕಿಸುವ ರಸ್ತೆ ಇದಾಗಿರುವುದರಿಂದ ಕೇರಳ ಭಾಗದಿಂದ ತ್ಯಾಜ್ಯ ತಂದು ಇಲ್ಲಿ ಎಸೆಯಲಾಗುತ್ತಿದೆಯೇ ಅನ್ನುವ ಅನುಮಾನ ವ್ಯಕ್ತವಾಗಿದೆ.
ಕೇರಳ ನೋಂದಾಯಿತ Kl 14AB3823 ಟಾಟಾ ಆಲ್ಟ್ರೋಝ್ ಕಾರಿನಲ್ಲಿ ತ್ಯಾಜ್ಯ ತಂದ ಆರೋಪಿ ಬಟ್ಯಡ್ಕ ನಿವೇಶನಗಳಿರುವ ಸಮೀಪ ಕಾರು ನಿಲ್ಲಿಸಿ ತ್ಯಾಜ್ಯ ಎಸೆದು ಪರಾರಿಯಾಗಿದ್ದಾನೆ. ಈ ಭಾಗದಲ್ಲಿ ರಸ್ತೆಬದಿಯಲ್ಲಿ ತ್ಯಾಜ್ಯ ಎಸೆಯುವ ಪರಿಣಾಮ ಮಾಲಿನ್ಯ ಉಂಟಾಗಿ ಸ್ಥಳೀಯರು ಗ್ರಾ.ಪಂ.ಗೆ ವ್ಯಾಪಕವಾಗಿ ದೂರುಗಳನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೇ.19 ರಂದು ಸಿಸಿಟಿವಿಯನ್ನು ಗ್ರಾ.ಪಂ ಅಳವಡಿಸಿತ್ತು. ಅಂದೇ ತ್ಯಾಜ್ಯ ಎಸೆಯುವವರ ಕೃತ್ಯ ಬಯಲಾಗಿದೆ. ಈ ಕುರಿತು ಮಂಜನಾಡಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…