ಮಂಜನಾಡಿ:ರಸ್ತೆ ಬದಿಯ ತ್ಯಾಜ್ಯ ಸಮಸ್ಯೆಯಿಂದ ಬೇಸತ್ತ ಗ್ರಾ.ಪಂ ಆಡಳಿತ ಸಿ.ಸಿ ಟಿವಿ ಅಳವಡಿಸಿದ ದಿನದಂದೇ ಕೇರಳ ನೋಂದಾಯಿಸಲ್ಪಟ್ಟ ಕಾರಿನಲ್ಲಿ ತ್ಯಾಜ್ಯವನ್ನು ತಂದು ರಸ್ತೆಬದಿಯಲ್ಲೇ ಎಸೆದು ಹೋಗಿರುವ ಘಟನೆ ಮಂಜನಾಡಿ ಗ್ರಾಮದ ಬಟ್ಯಡ್ಕ ನಿವೇಶನದ ಬಳಿ ಸೆರೆಯಾಗಿದೆ. ಕರ್ನಾಟಕ- ಕೇರಳ ಸಂಪರ್ಕಿಸುವ ರಸ್ತೆ ಇದಾಗಿರುವುದರಿಂದ ಕೇರಳ ಭಾಗದಿಂದ ತ್ಯಾಜ್ಯ ತಂದು ಇಲ್ಲಿ ಎಸೆಯಲಾಗುತ್ತಿದೆಯೇ ಅನ್ನುವ ಅನುಮಾನ ವ್ಯಕ್ತವಾಗಿದೆ.
ಕೇರಳ ನೋಂದಾಯಿತ Kl 14AB3823 ಟಾಟಾ ಆಲ್ಟ್ರೋಝ್ ಕಾರಿನಲ್ಲಿ ತ್ಯಾಜ್ಯ ತಂದ ಆರೋಪಿ ಬಟ್ಯಡ್ಕ ನಿವೇಶನಗಳಿರುವ ಸಮೀಪ ಕಾರು ನಿಲ್ಲಿಸಿ ತ್ಯಾಜ್ಯ ಎಸೆದು ಪರಾರಿಯಾಗಿದ್ದಾನೆ. ಈ ಭಾಗದಲ್ಲಿ ರಸ್ತೆಬದಿಯಲ್ಲಿ ತ್ಯಾಜ್ಯ ಎಸೆಯುವ ಪರಿಣಾಮ ಮಾಲಿನ್ಯ ಉಂಟಾಗಿ ಸ್ಥಳೀಯರು ಗ್ರಾ.ಪಂ.ಗೆ ವ್ಯಾಪಕವಾಗಿ ದೂರುಗಳನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೇ.19 ರಂದು ಸಿಸಿಟಿವಿಯನ್ನು ಗ್ರಾ.ಪಂ ಅಳವಡಿಸಿತ್ತು. ಅಂದೇ ತ್ಯಾಜ್ಯ ಎಸೆಯುವವರ ಕೃತ್ಯ ಬಯಲಾಗಿದೆ. ಈ ಕುರಿತು ಮಂಜನಾಡಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಿದ್ದಾರೆ.
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…