ಮಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಮುಂಬೈ ಮತ್ತು ದುಬೈನಿಂದ ಆಗಮಿಸಿದ್ದ ವಿಮಾನಗಳು ಇಂದು ಬೆಳಗ್ಗೆ ತಡವಾಗಿ ಲ್ಯಾಂಡ್ ಆಗಿದೆ.
ಹಾಗೆಯೇ, ಹೈದರಾಬಾದ್ನಿಂದ ಬಂದ ವಿಮಾನವು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಾಧ್ಯವಾಗದೆ ಗೋವಾಗೆ ಪ್ರಯಾಣಿಸಿ ಮತ್ತೆ ತಿರುಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲಾಂಡ್ ಆಯಿತು. ದಾರಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ವರುಣನ ಆರ್ಭಟ: ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುತಿದ್ದು ಕಳೆದ ಸೋಮವಾರದಿಂದ ಎಡಬಿಡದೆ ಸುರಿಯುತ್ತಿದೆ. ಶುಕ್ರವಾರದಂದು ಮಳೆ ಸ್ವಲ್ಪ ಮಟ್ಟಿಗೆ ಇಳಿಮುಖವಾಗಿದ್ದು, ಇಂದು ಮುಂಜಾನೆಯಿಂದ ಮತ್ತೆ ಆರಂಭವಾಗಿದೆ. ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಕಡೆ ಹಾನಿ ಸಂಭವಿಸಿದೆ. ಮಳೆಯಿಂದಾಗಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ನೀರುಪಾಲಾಗಿದ್ದಾನೆ ಹಾಗೂ ನೂರಾರು ಮನೆಗಳು ಜಲಾವೃತಗೊಂಡಿವೆ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…