ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಲಕದ ಕೆರೆ ಬಳಿಯ ಗುಡ್ಡೆಯಿಂದ ಟಿಪ್ಪರ್ ಮೂಲಕ ಮಣ್ಣು ಸಾಗಾಟ ಅಕ್ರಮವಾಗಿ ನಡೆಯುತ್ತಿದ್ದು ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಿಪ್ಪರ್ ಗಳಲ್ಲಿ ಎರ್ರಾಬಿರ್ರಿ ಯಾಗಿ ಕೆರೆಕಾಡು-ಜಲಕದಕೆರೆ-ತೋಕೂರು ದೇವಸ್ಥಾನ ಸಂಪರ್ಕ ರಸ್ತೆಯಲ್ಲಿ ಮಣ್ಣು ಸಾಗಾಟ ನಡೆಯುತ್ತಿದ್ದು ಗ್ರಾಮೀಣ ಭಾಗದ ಕಾಂಕ್ರೀಟ್ ರಸ್ತೆ ಕೆಸರುಮಯವಾಗಿ ಸಂಚಾರ ದುಸ್ತರವಾಗಿ ಪರಿಣಮಿಸಿದೆ.
ನೀತಿ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮ ಮಣ್ಣು ಸಾಗಾಟದಿಂದ ಕಾಂಕ್ರೀಟ್ ರಸ್ತೆಯ ಇಕ್ಕೆಲ ಚರಂಡಿಗಳು ನಾಶವಾಗಿದ್ದು ಗ್ರಾಮೀಣ ಭಾಗದ ರಸ್ತೆ ಕೂಡ ವಿನಾಶದ ಅಂಚಿನಲ್ಲಿದೆ.
ಕೂಡಲೇ ಮುಲ್ಕಿ ತಹಶೀಲ್ದಾರ್ ಹಾಗೂ ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…