ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಲಕದ ಕೆರೆ ಬಳಿಯ ಗುಡ್ಡೆಯಿಂದ ಟಿಪ್ಪರ್ ಮೂಲಕ ಮಣ್ಣು ಸಾಗಾಟ ಅಕ್ರಮವಾಗಿ ನಡೆಯುತ್ತಿದ್ದು ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಿಪ್ಪರ್ ಗಳಲ್ಲಿ ಎರ್ರಾಬಿರ್ರಿ ಯಾಗಿ ಕೆರೆಕಾಡು-ಜಲಕದಕೆರೆ-ತೋಕೂರು ದೇವಸ್ಥಾನ ಸಂಪರ್ಕ ರಸ್ತೆಯಲ್ಲಿ ಮಣ್ಣು ಸಾಗಾಟ ನಡೆಯುತ್ತಿದ್ದು ಗ್ರಾಮೀಣ ಭಾಗದ ಕಾಂಕ್ರೀಟ್ ರಸ್ತೆ ಕೆಸರುಮಯವಾಗಿ ಸಂಚಾರ ದುಸ್ತರವಾಗಿ ಪರಿಣಮಿಸಿದೆ.
ನೀತಿ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮ ಮಣ್ಣು ಸಾಗಾಟದಿಂದ ಕಾಂಕ್ರೀಟ್ ರಸ್ತೆಯ ಇಕ್ಕೆಲ ಚರಂಡಿಗಳು ನಾಶವಾಗಿದ್ದು ಗ್ರಾಮೀಣ ಭಾಗದ ರಸ್ತೆ ಕೂಡ ವಿನಾಶದ ಅಂಚಿನಲ್ಲಿದೆ.
ಕೂಡಲೇ ಮುಲ್ಕಿ ತಹಶೀಲ್ದಾರ್ ಹಾಗೂ ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…