ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ಬೊಳ್ಳೂರು ಜಂಕ್ಷನ್ ಬಳಿಯ ಅಂಗಡಿಯ ಬೀಗ ಮುರಿದು ನಗದು, ಚಾಕೋಲೇಟ್ ಐಸ್ ಕ್ರೀಮ್ ಕಳವು

ಮುಲ್ಕಿ: ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ-ಕಿನ್ನಿಗೋಳಿ ಹೆದ್ದಾರಿಯ ಸಮೀಪದ ಬೊಳ್ಳೂರು ಜಂಕ್ಷನ್ ಬಳಿಯ ಬಶೀರ್ ಮಾಲಿಕತ್ವದ ಅಂಗಡಿಯ ಎರಡು ಬೀಗ ಮುರಿದು ಕಳ್ಳರ ಡ್ರಾವರ್ ನಲ್ಲಿದ್ದ ರೂಪಾಯಿ 15 ಸಾವಿರ ನಗದು ಹಾಗೂ ಚಾಕೋಲೇಟ್ ಐಸ್ ಕ್ರೀಮ್ ನ್ನು ಬುಧವಾರ ರಾತ್ರಿ ಕಳವು ಮಾಡಿದ್ದಾರೆ.
ಈ ನಡುವೆ ಅಂಗಡಿ ಒಳಗೆ ಕಳ್ಳರು ರಾತ್ರಿ ಹೊತ್ತಿನಲ್ಲಿ ಸೋಡಾ ಹಾಗೂ ಬಿಸ್ಕೆಟ್ , ಐಸ್ ಕ್ರೀಮ್ ಕೂಡ ತಿಂದು ಮಜಾ ಮಾಡಿ ಅಲ್ಲಲ್ಲಿ ಬಿಸಾಡಿದ್ದಾರೆ
ಈ ಅಂಗಡಿಯಲ್ಲಿ ಎರಡನೇ ಬಾರಿ ಕಳ್ಳತನಕ್ಕೆ ಯತ್ನ ನಡೆದಿದ್ದು ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಂಗಡಿ ಮಾಲೀಕ ಬಶೀರ್ ನೀಡಿದ ದೂರಿನಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಳೆಗಾಲ ಸಮೀಪಿಸುತ್ತಿದ್ದಂತೆ ಮುಲ್ಕಿ ಪರಿಸರದಲ್ಲಿ ಕಳ್ಳರ ಹಾವಳಿ ಶುರುವಾಗಿದ್ದು ರಾತ್ರಿ ಹೊತ್ತು ಗಸ್ತು ಹೆಚ್ಚಿಸುವಂತೆ ಹಳೆಯಂಗಡಿ ಪಂಚಾಯತ್ ಸದಸ್ಯ ಅಬ್ದುಲ್ ಖಾದರ್ ಮುಲ್ಕಿ ಪೊಲೀಸರನ್ನು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!