ಉಡುಪಿ: ಸ್ನಾನ ಮಾಡಲೆಂದು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಮಾಣಿಬೆಟ್ಟು ಬಳಿ ಗುರುವಾರ ರಾತ್ರಿ ನಡೆದಿದೆ.
ಶಿರ್ವ ಎಂಎಸ್ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಪೂಜಾರಿ (20) ಮೃತ ದುರ್ದೈವಿ. ಇವರು ನಿನ್ನೆ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಅವರನ್ನು ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಯ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮೃತ ವಿದ್ಯಾರ್ಥಿಯ ನಿಧನಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಿಕರಿಗೆ ಸರಕಾರದಿಂದ ಸಿಗುವ ಪರಿಹಾರವನ್ನು ತೆಗೆಸಿಕೊಡಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…