ಕಾಪು ತಾಲೂಕಿನಾದ್ಯಂತ ಉಬರ್ ಮೀನುಗಾರಿಕೆಯ ಅಬ್ಬರ; ಗದ್ದೆ, ತೋಡುಗಳಲ್ಲಿ ರಾಶಿ ರಾಶಿ ಮೀನು
ಉಡುಪಿ: ಕರಾವಳಿಯಾದ್ಯಂತ ಕಳೆದ ನಾಲೈದು ದಿನಗಳಿಂದ ಮಳೆಯ ಆರ್ಭಟ ಜೋರಾಗಿದ್ದು, ನದಿ, ತೋಡು ಮತ್ತು ಗದ್ದೆಗಳಲ್ಲಿ ನೀರು ಸರಾಗವಾಗಿ ಹರಿಯಲಾರಂಭಿಸಿದೆ. ಈ ನಡುವೆ ಸಾಂಪ್ರದಾಯಿಕ ಉಬರ್ ಫಿಶಿಂಗ್ ಕೂಡ ಜೋರಾಗಿ ನಡೆಯುತ್ತಿದೆ.
ಕಾಪು ತಾಲೂಕಿನ ಶಂಕರಪುರ ಕಟಪಾಡಿ ಪಾಂಗಾಳ. ಇನ್ನಂಜೆ, ಕುರ್ಕಾಲು, ಮಣಿಪುರ ಸಹಿತ ವಿವಿಧೆಡೆಗಳಲ್ಲಿನ ಪ್ರದೇಶಗಳ ಗದ್ದೆಗಳಲ್ಲಿ ಮತ್ತು ತೋಡುಗಳ ಬದಿಯಲ್ಲಿ ಕಳೆದ ಎರಡು ದಿನಗಳಿಂದ ಉಬರ್ ಮೀನುಗಾರಿಕೆ ಅಬ್ಬರ ಜೋರಾಗಿದೆ.
ಸಾಮಾನ್ಯವಾಗಿ ಏಡಿಗಳು ಹತ್ತಾರು ಅಡಿಗಳಷ್ಟು ಆಳದ ಬಿಲ ಕೊರೆದು ಅವುಗಳಲ್ಲಿ ಸುರಕ್ಷಿತವಾಗಿರುತ್ತವೆ. ಮೀನುಗಳು ಗಟ್ಟಿ ಕೆಸರಿನಲ್ಲಿ ಅವಿತು ಕುಳಿತಿರುತ್ತವೆ. ಮೊದಲ ಮಳೆ ಬೀಳುತ್ತಿದ್ದಂತೆ ಮೊಟ್ಟೆಯಿಡಲು ಸುರಕ್ಷಿತ ಜಾಗ ಹುಡುಕಿಕೊಂಡು ನೀರು ಕಡಿಮೆ ಇರುವ ಬಯಲು ಪ್ರದೇಶ, ಗದ್ದೆಗಳಿಗೆ ಮತ್ತು ಸಮತಟ್ಟು ಪ್ರದೇಶಗಳತ್ತ ಬಂದು ಮೊಟ್ಟೆ ಇಡುತ್ತವೆ. ಆದ್ದರಿಂದ ಗದ್ದೆ ಪ್ರದೇಶದಲ್ಲಿ ಹೆಚ್ಚಾಗಿ ಈ ಮೀನುಗಳು ಕಾಣಸಿಗುತ್ತವೆ. ಮೀನು ಹಿಡಿಯುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿವೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…