ಕಾಪು ತಾಲೂಕಿನಾದ್ಯಂತ ಉಬರ್ ಮೀನುಗಾರಿಕೆಯ ಅಬ್ಬರ; ಗದ್ದೆ, ತೋಡುಗಳಲ್ಲಿ ರಾಶಿ ರಾಶಿ ಮೀನು
ಉಡುಪಿ: ಕರಾವಳಿಯಾದ್ಯಂತ ಕಳೆದ ನಾಲೈದು ದಿನಗಳಿಂದ ಮಳೆಯ ಆರ್ಭಟ ಜೋರಾಗಿದ್ದು, ನದಿ, ತೋಡು ಮತ್ತು ಗದ್ದೆಗಳಲ್ಲಿ ನೀರು ಸರಾಗವಾಗಿ ಹರಿಯಲಾರಂಭಿಸಿದೆ. ಈ ನಡುವೆ ಸಾಂಪ್ರದಾಯಿಕ ಉಬರ್ ಫಿಶಿಂಗ್ ಕೂಡ ಜೋರಾಗಿ ನಡೆಯುತ್ತಿದೆ.
ಕಾಪು ತಾಲೂಕಿನ ಶಂಕರಪುರ ಕಟಪಾಡಿ ಪಾಂಗಾಳ. ಇನ್ನಂಜೆ, ಕುರ್ಕಾಲು, ಮಣಿಪುರ ಸಹಿತ ವಿವಿಧೆಡೆಗಳಲ್ಲಿನ ಪ್ರದೇಶಗಳ ಗದ್ದೆಗಳಲ್ಲಿ ಮತ್ತು ತೋಡುಗಳ ಬದಿಯಲ್ಲಿ ಕಳೆದ ಎರಡು ದಿನಗಳಿಂದ ಉಬರ್ ಮೀನುಗಾರಿಕೆ ಅಬ್ಬರ ಜೋರಾಗಿದೆ.
ಸಾಮಾನ್ಯವಾಗಿ ಏಡಿಗಳು ಹತ್ತಾರು ಅಡಿಗಳಷ್ಟು ಆಳದ ಬಿಲ ಕೊರೆದು ಅವುಗಳಲ್ಲಿ ಸುರಕ್ಷಿತವಾಗಿರುತ್ತವೆ. ಮೀನುಗಳು ಗಟ್ಟಿ ಕೆಸರಿನಲ್ಲಿ ಅವಿತು ಕುಳಿತಿರುತ್ತವೆ. ಮೊದಲ ಮಳೆ ಬೀಳುತ್ತಿದ್ದಂತೆ ಮೊಟ್ಟೆಯಿಡಲು ಸುರಕ್ಷಿತ ಜಾಗ ಹುಡುಕಿಕೊಂಡು ನೀರು ಕಡಿಮೆ ಇರುವ ಬಯಲು ಪ್ರದೇಶ, ಗದ್ದೆಗಳಿಗೆ ಮತ್ತು ಸಮತಟ್ಟು ಪ್ರದೇಶಗಳತ್ತ ಬಂದು ಮೊಟ್ಟೆ ಇಡುತ್ತವೆ. ಆದ್ದರಿಂದ ಗದ್ದೆ ಪ್ರದೇಶದಲ್ಲಿ ಹೆಚ್ಚಾಗಿ ಈ ಮೀನುಗಳು ಕಾಣಸಿಗುತ್ತವೆ. ಮೀನು ಹಿಡಿಯುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿವೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…