ಕಾಪು ತಾಲೂಕಿನಾದ್ಯಂತ ಉಬರ್ ಮೀನುಗಾರಿಕೆಯ ಅಬ್ಬರ; ಗದ್ದೆ, ತೋಡುಗಳಲ್ಲಿ ರಾಶಿ ರಾಶಿ ಮೀನು
ಉಡುಪಿ: ಕರಾವಳಿಯಾದ್ಯಂತ ಕಳೆದ ನಾಲೈದು ದಿನಗಳಿಂದ ಮಳೆಯ ಆರ್ಭಟ ಜೋರಾಗಿದ್ದು, ನದಿ, ತೋಡು ಮತ್ತು ಗದ್ದೆಗಳಲ್ಲಿ ನೀರು ಸರಾಗವಾಗಿ ಹರಿಯಲಾರಂಭಿಸಿದೆ. ಈ ನಡುವೆ ಸಾಂಪ್ರದಾಯಿಕ ಉಬರ್ ಫಿಶಿಂಗ್ ಕೂಡ ಜೋರಾಗಿ ನಡೆಯುತ್ತಿದೆ.
ಕಾಪು ತಾಲೂಕಿನ ಶಂಕರಪುರ ಕಟಪಾಡಿ ಪಾಂಗಾಳ. ಇನ್ನಂಜೆ, ಕುರ್ಕಾಲು, ಮಣಿಪುರ ಸಹಿತ ವಿವಿಧೆಡೆಗಳಲ್ಲಿನ ಪ್ರದೇಶಗಳ ಗದ್ದೆಗಳಲ್ಲಿ ಮತ್ತು ತೋಡುಗಳ ಬದಿಯಲ್ಲಿ ಕಳೆದ ಎರಡು ದಿನಗಳಿಂದ ಉಬರ್ ಮೀನುಗಾರಿಕೆ ಅಬ್ಬರ ಜೋರಾಗಿದೆ.
ಸಾಮಾನ್ಯವಾಗಿ ಏಡಿಗಳು ಹತ್ತಾರು ಅಡಿಗಳಷ್ಟು ಆಳದ ಬಿಲ ಕೊರೆದು ಅವುಗಳಲ್ಲಿ ಸುರಕ್ಷಿತವಾಗಿರುತ್ತವೆ. ಮೀನುಗಳು ಗಟ್ಟಿ ಕೆಸರಿನಲ್ಲಿ ಅವಿತು ಕುಳಿತಿರುತ್ತವೆ. ಮೊದಲ ಮಳೆ ಬೀಳುತ್ತಿದ್ದಂತೆ ಮೊಟ್ಟೆಯಿಡಲು ಸುರಕ್ಷಿತ ಜಾಗ ಹುಡುಕಿಕೊಂಡು ನೀರು ಕಡಿಮೆ ಇರುವ ಬಯಲು ಪ್ರದೇಶ, ಗದ್ದೆಗಳಿಗೆ ಮತ್ತು ಸಮತಟ್ಟು ಪ್ರದೇಶಗಳತ್ತ ಬಂದು ಮೊಟ್ಟೆ ಇಡುತ್ತವೆ. ಆದ್ದರಿಂದ ಗದ್ದೆ ಪ್ರದೇಶದಲ್ಲಿ ಹೆಚ್ಚಾಗಿ ಈ ಮೀನುಗಳು ಕಾಣಸಿಗುತ್ತವೆ. ಮೀನು ಹಿಡಿಯುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿವೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…