ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮೊಗೇರ ಸಮುದಾಯದವರಿಂದ ವಿಶೇಷ ನಾಗರಾಧನೆ

ಉಡುಪಿ: ಕಾಪು ತಾಲೂಕಿನ ಕುತ್ಯಾರು ಸಮೀಪದ ಮೂಲೊಟ್ಟು ಗುತ್ತು ನಾಗಬನದಲ್ಲಿ ವರ್ಷಕ್ಕೊಮ್ಮೆ ತುಳುವಿನ ಬೇಷ ತಿಂಗಳಲ್ಲಿ ನಡೆಯುವ ಪರಿಶಿಷ್ಟವರ್ಗದ ನಾಗರಾಧನೆ ಪೂಜೆಯು ವಿಶಿಷ್ಟ ರೀತಿಯಲ್ಲಿ ನಡೆಯಿತು.


ವಿವಿಧ ಜಿಲ್ಲೆಗಳ ಪರಿಶಿಷ್ಟವರ್ಗದ ಮೊಗೇರ ಸಮುದಾಯದವರಿಂದ ಆರಾಧಿಸಲ್ಪಡುವ ಈ ನಾಗಬನದಲ್ಲಿ ವರ್ಷಕ್ಕೊಮ್ಮೆ ಮಾತ್ರ ಪೂಜೆ ನಡೆಯುವುದು ಅನಾದಿ ಕಾಲದಿಂದ ನಡೆದುಬಂದ ಸಂಪ್ರದಾಯವಾಗಿದೆ. ನೈಸರ್ಗಿಕವಾಗಿ ತನ್ನ ಮೂಲ ಸ್ವರೂಪವನ್ನು ಉಳಿಸಿಕೊಂಡ ಈ ವಿಶಿಷ್ಟ ನಾಗಬನದಲ್ಲಿ ನಾಗರಪಂಚಮಿಯಂತಹ ಪರ್ವದಿನದಲ್ಲಾಗಲೀ, ಭಕ್ತರು ಬಯಸಿದ ಇತರ ದಿನದಲ್ಲಾಗಲೀ ಪೂಜೆಗೆ ಅವಕಾಶವಿಲ್ಲ.
ಪರಿಶಿಷ್ಟ ವರ್ಗದ ಮೊಗೇರ ಸಮುದಾಯದ 16 ಬಳಿ ಸಾವಿರ ಮಾಗಣೆಯ ಪ್ರಧಾನ ನಾಗಬನವಾಗಿದ್ದು, ಈ ವಾರ್ಷಿಕ ಆರಾಧನೆ ಪುರಾತನ ಕಾಲದಿಂದಲೂ ಸಂಪ್ರದಾಯಬದ್ಧವಾಗಿ ನಡೆದುಕೊಂಡು ಬರುತ್ತಿದೆ. ಶಿರ್ವ ಸೊರ್ಪು ಶ್ರೀಬ್ರಹ್ಮ ಮುಗ್ಗೇರ್ಕಳ ದೈವಸ್ಥಾನದ ಗುರಿಕಾರರಿಗೆ ಮಾತ್ರ ಸನ್ನಿಧಿಯಲ್ಲಿ ತಂಪೆರೆಯುವ ಪೂಜೆ ಸಲ್ಲಿಸುವ ಅಧಿಕಾರವಿದ
ಪುರಾತನ ಸಂಪ್ರದಾಯದಂತೆ ಕಾಸರಗೋಡಿನಿಂದ ಕಾರವಾರದವರೆಗಿನ ವಿವಿಧ ಜಿಲ್ಲೆಗಳಿಂದ ಬಂದ ಮೊಗೇರ ಸಮುದಾಯದ ಭಕ್ತರು ಬೆಳಿಗ್ಗೆ ಮೂಲೊಟ್ಟು ಗುತ್ತು ಮೂಲ ಮನೆಗೆ ತೆರಳಿ ಬಾವಿಯ ನೀರು ಕುಡಿದು ಪೂಜೆ ಸಲ್ಲಿಸಿದ ಬಳಿಕ ನಾಗಬನವನ್ನು ಶುಚಿಗೊಳಿಸಿ ಮಣ್ಣಿನ – ಮಡಕೆಯಲ್ಲಿ ತಯಾರಿಸುವ ನಾಗನ ಬಿಂಬದಲ್ಲಿ ನಾಗಾರಾಧನೆಯ ಪೂಜೆ ನಡೆಯುತ್ತದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!