ಉಡುಪಿ: ಕಾಪು ತಾಲೂಕಿನ ಕುತ್ಯಾರು ಸಮೀಪದ ಮೂಲೊಟ್ಟು ಗುತ್ತು ನಾಗಬನದಲ್ಲಿ ವರ್ಷಕ್ಕೊಮ್ಮೆ ತುಳುವಿನ ಬೇಷ ತಿಂಗಳಲ್ಲಿ ನಡೆಯುವ ಪರಿಶಿಷ್ಟವರ್ಗದ ನಾಗರಾಧನೆ ಪೂಜೆಯು ವಿಶಿಷ್ಟ ರೀತಿಯಲ್ಲಿ ನಡೆಯಿತು.
ವಿವಿಧ ಜಿಲ್ಲೆಗಳ ಪರಿಶಿಷ್ಟವರ್ಗದ ಮೊಗೇರ ಸಮುದಾಯದವರಿಂದ ಆರಾಧಿಸಲ್ಪಡುವ ಈ ನಾಗಬನದಲ್ಲಿ ವರ್ಷಕ್ಕೊಮ್ಮೆ ಮಾತ್ರ ಪೂಜೆ ನಡೆಯುವುದು ಅನಾದಿ ಕಾಲದಿಂದ ನಡೆದುಬಂದ ಸಂಪ್ರದಾಯವಾಗಿದೆ. ನೈಸರ್ಗಿಕವಾಗಿ ತನ್ನ ಮೂಲ ಸ್ವರೂಪವನ್ನು ಉಳಿಸಿಕೊಂಡ ಈ ವಿಶಿಷ್ಟ ನಾಗಬನದಲ್ಲಿ ನಾಗರಪಂಚಮಿಯಂತಹ ಪರ್ವದಿನದಲ್ಲಾಗಲೀ, ಭಕ್ತರು ಬಯಸಿದ ಇತರ ದಿನದಲ್ಲಾಗಲೀ ಪೂಜೆಗೆ ಅವಕಾಶವಿಲ್ಲ.
ಪರಿಶಿಷ್ಟ ವರ್ಗದ ಮೊಗೇರ ಸಮುದಾಯದ 16 ಬಳಿ ಸಾವಿರ ಮಾಗಣೆಯ ಪ್ರಧಾನ ನಾಗಬನವಾಗಿದ್ದು, ಈ ವಾರ್ಷಿಕ ಆರಾಧನೆ ಪುರಾತನ ಕಾಲದಿಂದಲೂ ಸಂಪ್ರದಾಯಬದ್ಧವಾಗಿ ನಡೆದುಕೊಂಡು ಬರುತ್ತಿದೆ. ಶಿರ್ವ ಸೊರ್ಪು ಶ್ರೀಬ್ರಹ್ಮ ಮುಗ್ಗೇರ್ಕಳ ದೈವಸ್ಥಾನದ ಗುರಿಕಾರರಿಗೆ ಮಾತ್ರ ಸನ್ನಿಧಿಯಲ್ಲಿ ತಂಪೆರೆಯುವ ಪೂಜೆ ಸಲ್ಲಿಸುವ ಅಧಿಕಾರವಿದ
ಪುರಾತನ ಸಂಪ್ರದಾಯದಂತೆ ಕಾಸರಗೋಡಿನಿಂದ ಕಾರವಾರದವರೆಗಿನ ವಿವಿಧ ಜಿಲ್ಲೆಗಳಿಂದ ಬಂದ ಮೊಗೇರ ಸಮುದಾಯದ ಭಕ್ತರು ಬೆಳಿಗ್ಗೆ ಮೂಲೊಟ್ಟು ಗುತ್ತು ಮೂಲ ಮನೆಗೆ ತೆರಳಿ ಬಾವಿಯ ನೀರು ಕುಡಿದು ಪೂಜೆ ಸಲ್ಲಿಸಿದ ಬಳಿಕ ನಾಗಬನವನ್ನು ಶುಚಿಗೊಳಿಸಿ ಮಣ್ಣಿನ – ಮಡಕೆಯಲ್ಲಿ ತಯಾರಿಸುವ ನಾಗನ ಬಿಂಬದಲ್ಲಿ ನಾಗಾರಾಧನೆಯ ಪೂಜೆ ನಡೆಯುತ್ತದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…