ಉಡುಪಿ: ಕಾಪು ತಾಲೂಕಿನ ಕುತ್ಯಾರು ಸಮೀಪದ ಮೂಲೊಟ್ಟು ಗುತ್ತು ನಾಗಬನದಲ್ಲಿ ವರ್ಷಕ್ಕೊಮ್ಮೆ ತುಳುವಿನ ಬೇಷ ತಿಂಗಳಲ್ಲಿ ನಡೆಯುವ ಪರಿಶಿಷ್ಟವರ್ಗದ ನಾಗರಾಧನೆ ಪೂಜೆಯು ವಿಶಿಷ್ಟ ರೀತಿಯಲ್ಲಿ ನಡೆಯಿತು.
ವಿವಿಧ ಜಿಲ್ಲೆಗಳ ಪರಿಶಿಷ್ಟವರ್ಗದ ಮೊಗೇರ ಸಮುದಾಯದವರಿಂದ ಆರಾಧಿಸಲ್ಪಡುವ ಈ ನಾಗಬನದಲ್ಲಿ ವರ್ಷಕ್ಕೊಮ್ಮೆ ಮಾತ್ರ ಪೂಜೆ ನಡೆಯುವುದು ಅನಾದಿ ಕಾಲದಿಂದ ನಡೆದುಬಂದ ಸಂಪ್ರದಾಯವಾಗಿದೆ. ನೈಸರ್ಗಿಕವಾಗಿ ತನ್ನ ಮೂಲ ಸ್ವರೂಪವನ್ನು ಉಳಿಸಿಕೊಂಡ ಈ ವಿಶಿಷ್ಟ ನಾಗಬನದಲ್ಲಿ ನಾಗರಪಂಚಮಿಯಂತಹ ಪರ್ವದಿನದಲ್ಲಾಗಲೀ, ಭಕ್ತರು ಬಯಸಿದ ಇತರ ದಿನದಲ್ಲಾಗಲೀ ಪೂಜೆಗೆ ಅವಕಾಶವಿಲ್ಲ.
ಪರಿಶಿಷ್ಟ ವರ್ಗದ ಮೊಗೇರ ಸಮುದಾಯದ 16 ಬಳಿ ಸಾವಿರ ಮಾಗಣೆಯ ಪ್ರಧಾನ ನಾಗಬನವಾಗಿದ್ದು, ಈ ವಾರ್ಷಿಕ ಆರಾಧನೆ ಪುರಾತನ ಕಾಲದಿಂದಲೂ ಸಂಪ್ರದಾಯಬದ್ಧವಾಗಿ ನಡೆದುಕೊಂಡು ಬರುತ್ತಿದೆ. ಶಿರ್ವ ಸೊರ್ಪು ಶ್ರೀಬ್ರಹ್ಮ ಮುಗ್ಗೇರ್ಕಳ ದೈವಸ್ಥಾನದ ಗುರಿಕಾರರಿಗೆ ಮಾತ್ರ ಸನ್ನಿಧಿಯಲ್ಲಿ ತಂಪೆರೆಯುವ ಪೂಜೆ ಸಲ್ಲಿಸುವ ಅಧಿಕಾರವಿದ
ಪುರಾತನ ಸಂಪ್ರದಾಯದಂತೆ ಕಾಸರಗೋಡಿನಿಂದ ಕಾರವಾರದವರೆಗಿನ ವಿವಿಧ ಜಿಲ್ಲೆಗಳಿಂದ ಬಂದ ಮೊಗೇರ ಸಮುದಾಯದ ಭಕ್ತರು ಬೆಳಿಗ್ಗೆ ಮೂಲೊಟ್ಟು ಗುತ್ತು ಮೂಲ ಮನೆಗೆ ತೆರಳಿ ಬಾವಿಯ ನೀರು ಕುಡಿದು ಪೂಜೆ ಸಲ್ಲಿಸಿದ ಬಳಿಕ ನಾಗಬನವನ್ನು ಶುಚಿಗೊಳಿಸಿ ಮಣ್ಣಿನ – ಮಡಕೆಯಲ್ಲಿ ತಯಾರಿಸುವ ನಾಗನ ಬಿಂಬದಲ್ಲಿ ನಾಗಾರಾಧನೆಯ ಪೂಜೆ ನಡೆಯುತ್ತದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…