ಕರಾವಳಿ

ಪಟ್ಲ ಸಂಭ್ರಮದಲ್ಲಿ ವಿವಿಧ ಕ್ಷೇತ್ರಗಳ ಅನನ್ಯ ಸಾಧಕರಿಗೆ ಯಕ್ಷಧ್ರುವ ಕಲಾ ಗೌರವ!

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಇದರ ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮ ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಉದ್ಘಾಟನೆ ನೆರವೇರಿಸಿ ಮಾತಾಡಿದ ಹೇರಂಭ ಕಮಿಕಲ್ಸ್ ಇಂಡಸ್ಟ್ರಿಸ್ ಮುಂಬೈ ಇದರ ಸಿಎಂಡಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಅವರು, ಯಕ್ಷಗಾನ ನಮ್ಮ ತುಳುನಾಡಿನ ಅನನ್ಯ ಪರಂಪರೆ, ಯಕ್ಷಗಾನ ಕಲಾವಿದರಿಗೆ ನೆರವಾಗುವ ದೃಷ್ಟಿಯಲ್ಲಿ ದಾನಿಗಳನ್ನು ಒಗ್ಗೂಡಿಸಿಕೊಂಡು ಪಟ್ಲ ಸತೀಶ್ ಶೆಟ್ಟಿಯವರು ಯಕ್ಷಧ್ರುವ ಪಟ್ಲ ಫೌಂಡೇಶನ್ ಅನ್ನು ಸ್ಥಾಪಿಸಿದರು ಎಂದರು.

ಪ್ರತೀ ವರ್ಷ ನಾವು ಯಕ್ಷಗಾನ ಕಲಾವಿದರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ. ಮುಂದೆಯೂ ಇನ್ನಷ್ಟು ದಾನಿಗಳ ನೆರವು ಸಂಘಟನೆಗೆ ಬೇಕಿದೆ. ಎಲ್ಲರೂ ಜೊತೆಗೂಡಿ ನಡೆದಲ್ಲಿ ಸಂಘಟನೆಯ ಶ್ರಮ ಸಾರ್ಥಕವಾಗಲಿದೆ ಎಂದರು. ಆಶೀರ್ವಚನಗೈದ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು, ಒಂಬತ್ತನೇ ವರ್ಷದ ಸಂಭ್ರಮದಲ್ಲಿರುವ ಪಟ್ಲ ಫೌಂಡೇಶನ್ ಟ್ರಸ್ಟ್‌ ಆಶಕ್ತ ಕಲಾವಿದರಿಗೆ ನೆರವಾಗುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. 40 ಬೇರೆ ಬೇರೆ ಊರುಗಳಲ್ಲಿ ಸಂಘಟನೆ ವಿಸ್ತರಿಸಲ್ಪಟ್ಟಿದ್ದು ಪಟ್ಟ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ಸಾರ್ಥಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಇದು ಯಕ್ಷ ಕಲಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ’ ಎಂದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಮಾತನಾಡಿ, ‘ಪಟ್ಲ ಫೌಂಡೇಶನ್ ಟ್ರಸ್ಟ್ ದೇವಸ್ಥಾನವಿದ್ದಂತೆ, ದಾನಿಗಳು ಇಲ್ಲಿ ದೇವರಿದ್ದಂತೆ. ಕಷ್ಟದಲ್ಲಿ ಬರುವ ಕಲಾವಿದರಿಗೆ ಪಟ್ಲ ಸತೀಶ್ ಶೆಟ್ಟಿ ಅವರು ಬೆನ್ನುತಟ್ಟಿ ಪ್ರೋತ್ಸಾಹ ನೀಡುತ್ತಿದ್ದಾರೆ. ಜನರಿಗೆ ನೆರವಾಗುವಾಗ ಆರೋಪ ಮಾಡುವವರು ಇದ್ದೇ ಇರುತ್ತಾರೆ. ನಾವು ಯಾವುದೇ ಕಾರಣಕ್ಕೂ ನಿಲ್ಲಬಾರದು. ಯಾರೇನೇ ಹೇಳಿದರೂ ನಮ್ಮ ಗುರಿ ಸ್ಪಷ್ಟವಾಗಿದ್ದು ಮುಂದುವರಿಯಬೇಕು” ಎಂದರು.

ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕ ವೆಂಕಟ್ರಮಣ ಅಸ್ರಣ್ಣರು ಮಾತನಾಡಿ, “ಪಟ್ಟರು ಪರೋಪಕಾರಕ್ಕಾಗಿ ಸಂಘಟನೆಯನ್ನು ಸ್ಥಾಪಿಸಿದರು. ಈ ಮೂಲಕ ಬಹಳಷ್ಟು ಕಲಾವಿದರಿಗೆ ನಾನಾ ರೀತಿಯಲ್ಲಿ ನೆರವಾಗಿದ್ದಾರೆ. ಇನ್ನು ಮುಂದೆಯೂ ಇವರ ಸಂಘಟನೆ ರಾಜ್ಯದಲ್ಲೆಡೆ ವಿಸ್ತರಣೆಯಾಗಲಿ. ಪಟ್ಲರ ಕೀರ್ತಿ ಎಲ್ಲೆಡೆ ಹರಡಲಿ” ಎಂದು ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ 2024ರ ಯಕ್ಷಧ್ರುವ ಕಲಾಗೌರವ ಸಮರ್ಪಿಸಲಾಯಿತು. ವೈದಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಡಾ. ಯಾಜಿ ನಿರಂಜನ್ ಭಟ್, ಮಾಧ್ಯಮ ಕ್ಷೇತ್ರದಲ್ಲಿ ಚಿದಂಬರ ಬೈಕಂಪಾಡಿ, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಲೆ.ಕ. ವಿನ್ಸೆಂಟ್ ಡಿಸೋಜ, ಕಮಾಂಡರ್ ಶಾಮ್ ರಾಜ್, ಕಲಾ ಸಂಘಟನೆಗಾಗಿ ಯಕ್ಷಗಾನ ಅಭ್ಯಾಸ ತರಬೇತಿ ದುಬೈ, ಶಾಸ್ತ್ರೀಯ ಸಂಗೀತಕ್ಕಾಗಿ ಕುದುಮಾರು ಎಸ್. ವೆಂಕಟರಾವ್, ಸಾಹಿತ್ಯ ಕ್ಷೇತ್ರದ ಸಾಧನಗಾಗಿ ಡಾ. ರಮಾನಂದ ಬನಾರಿ, ಹರಿಕಥೆ ಜಗದೀಶ್ ದಾಸ್ ಪೊಳಲಿ, ರಂಗಭೂಮಿ ಸಾಧನೆಗಾಗಿ ಲಕ್ಷ್ಮಣ ಕುಮಾರ್ ಮಲ್ಲೂರು, ಭರತನಾಟ್ಯ ಕಮಲಾಕ್ಷ, ಅಚಾರ್‌ ಬೆಳ್ತಂಗಡಿ, ಕಂಬಳ ಕ್ಷೇತ್ರದಲ್ಲಿ ಅಶೋಕ್ ಶೆಟ್ಟಿ ಬೇಲಾಡಿ, ಯಕ್ಷಗಾನ ಚಿದಂಬರ ಬಾಬು ಪೂಜಾರಿ, ಯಕ್ಷಗಾನ(ಬಡಗು) ನಿರ್ಜೆಡ್ಡು ಚಂದ್ರ ಕುಲಾಲ್, ಯಕ್ಷಗುರು ಮಹಾವೀರ ಪಾಂಡಿ, ಹವ್ಯಾಸಿ ಜಗನ್ನಾಥ ಶೆಟ್ಟಿ ನಚ್ಚರಿಪೇಟೆ, ಮಹಿಳಾ ಪೂರ್ಣಿಮಾ ಯತೀಶ್ ರೈ, ದೈವಾರಾಧನೆ ಕ್ಷೇತ್ರದಲ್ಲಿ ಕೊರಗ ಪಾಣಾರ, ಭಜನ ಭೋಜ ಸುವರ್ಣ ಕುಲಶೇಖರ ಅವರನ್ನು ಅತಿಥಿಗಳ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಅವರು ಪ್ರಾಸ್ತಾವಿಕ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಆರೋಗ್ಯ ಶಿಬಿರವನ್ನು ಕಿಟ್ ನೀಡುವ ಮೂಲಕ ಉದ್ಘಾಟಿಸಿದ ಡಾ.ರವೀಶ್ ತುಂಗಾ ಅವರು, ಪಟ್ಲ ಸಂಭ್ರಮ ತುಳುನಾಡಿನ ಉತ್ಸವವಾಗಿದೆ. ಕಲಾವಿದರಿಗೆ ಆರೋಗ್ಯ ಶಿಬಿರದ ಜೊತೆಗೆ ವಿಮೆ ಸೌಲಭ್ಯ ಕಲ್ಪಿಸಿರುವುದು ದೇವರು ಮೆಚ್ಚುವ ಕೆಲಸ ಎಂದರು. ರಕ್ತದಾನ ಶಿಬಿರದ ಉದ್ಘಾಟನೆಯನ್ನು ಡಾ. ಶ್ರೀಧರ್ ಶೆಟ್ಟಿ ನೆರವೇರಿಸಿದರು. ಬಳಿಕ ಮಾತಾಡಿದ ಅವರು, ‘ರಕ್ತದಾನ ಅತ್ಯಂತ ಪ್ರಮುಖವಾದ ದಾನವಾಗಿದೆ. 18ರಿಂದ 60 ವರ್ಷದೊಳಗಿನ ಯಾರು ಬೇಕಾದರೂ ರಕ್ತವನ್ನು ದಾನ ಮಾಡಬಹುದು. ರಕ್ತದಾನ ಕುರಿತು ಮೂಢನಂಬಿಕೆ ಬೆಳಸಿಕೊಳ್ಳಬಾರದು ಎಂದರು.

ವೇದಿಕಯಲ್ಲಿ ಬಡಾಜೆ ರವಿಶಂಕರ್ ಶೆಟ್ಟಿ, ಪಾವಂಜೆ ಕ್ಷೇತ್ರದ ಆಡಳಿತ ಮಂಡಳಿ ಮೊತ್ತೇಸರ ಶಶೀಂದ್ರ ಕುಮಾರ್, ಡಾ.ಪದ್ಮನಾಭ ಕಾಮತ್, ಬಿಬಿಎಂಪಿ ಜಂಟಿ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಉದ್ಯಮಿ ರಘುನಾಥ್ ಸೋಮಯಾಜಿ, ನಿಟ್ಟೆ ಯೂನಿವರ್ಸಿಟಿಯ ಪ್ರೊ. ಡಾ.ಬಿ.ಸತೀಶ್ ಕುಮಾರ್ ಭಂಡಾರಿ, ಹಿರಿಯ ನ್ಯಾಯವಾದಿ ಭೋಜಿ ನಾರಾಯಣ ಪೂಜಾರಿ, ಡಾ.ರವೀಶ್ ತುಂಗಾ, ಡಾ.ಶ್ರೀಧರ್ ಶೆಟ್ಟಿ, ಭುವನೇಶ್ ಪಚ್ಚಿನಡ್ಕ, ಪಟ್ಲಗುತ್ತು ಮಹಾಬಲ ಶೆಟ್ಟಿ, ಅಶೋಕ್‌ ಶೆಟ್ಟಿ ಬೆಳ್ಳಾಡಿ, ಜಯರಾಮ್‌ ಶೇಖ, ಕರುಣಾಕರ ರೈ ದೇರ್ಲ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಬಾಲಕೃಷ್ಣ ಹೆಗ್ಡೆ, ಭುಜಬಲಿ ಧರ್ಮಸ್ಥಳ, ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ್ ಎಸ್. ಪೂಂಜಾ, ಸಂತೋಷ್ ಕುಮಾರ್ ರೈ ಬೋಳಿಯಾರ್, ಪ್ರಕಾಶ್ ರಾವ್, ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ಕೋ ಶಾಧಿಕಾರಿ CA ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಪ್ರದೀಪ್ ಆಳ್ವ, ಕದ್ರಿ, ಜಗನ್ನಾಥ ಶೆಟ್ಟಿ ಬಾಳ, ಉಪಾಧ್ಯಕ್ಷ ಅಶೋಕ್ ಆರ್ ಶೆಟ್ಟಿ ಪೆರ್ಮುದೆ, ಡಾ ಮನುರಾವ್‌, ದುರ್ಗಾಪ್ರಸಾದ್ ಪಿವಿ ಪಡುಬಿದ್ರೆ, ಜೊತೆ ಕಾರ್ಯದರ್ಶಿ ರಾಜೀವ ಪೂಜಾರಿ ಕೈಕಂಬ, ರವಿಚಂದ್ರ ಶೆಟ್ಟಿ ಅಶೋಕನಗರ ಉಪಸ್ಥಿತರಿದ್ದರು. ಪಟ್ಲ ಸತೀಶ್ ಶೆಟ್ಟಿ ಸ್ವಾಗತಿಸಿದರು. ರವಿ ಶೆಟ್ಟಿ ವಂದಿಸಿದರು. ಕದ್ರಿ ನವನೀತ ಶೆಟ್ಟಿ, ಪುರುಷೋತ್ತಮ ಭಂಡಾರಿ ಕಾರ್ಯಕ್ರಮ ನಿರ್ವಹಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

22 hours ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

22 hours ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

3 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

3 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

3 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

4 days ago